ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಸಂತ್ರಸ್ತ ಯುವತಿ ವಕೀಲರ ಮೂಲಕ ಶುಕ್ರವಾರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ,
ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ ಅವರು, ನಾಳೆ ಇದಕ್ಕಿಂತ ದೊಡ್ಡ ಬಾಂಬ್ ಸ್ಫೋಟವಾಗಲಿದೆ. ನಾಳೆಯವರೆಗೆ ಕಾಯಿರಿ, ಇದು ಬರೀ ಟ್ರಯಲ್. ನಾಳೆ ಸಂಜೆ 4ರಿಂದ 6 ಗಂಟೆಯೊಳಗೆ ಬಾಂಬ್ ಸ್ಫೋಟವಾಗುತ್ತದೆ. ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಆಗುತ್ತದೆ. ನಾಳೆ ನಾನೇ ಮಾತಾಡ್ತೇನೆ ಎಂದು ಹೇಳಿದ್ದಾರೆ. ಇನ್ನು ಯುವತಿ ಆಡಿಯೋ ಕುರಿತು ಪ್ರತಿಕ್ರಿಯಿಸಿರುವ ಅವರು, ಆ ಬಗ್ಗೆ ನನಗೆ ಗೊತ್ತಿಲ್ಲ. ಆಡಿಯೋವನ್ನು ನಾನು ಕೇಳಿಸಿಕೊಂಡಿಲ್ಲ ಎಂದು ತಿಳಿಸಿದ್ದಾರೆ. ಆಡಿಯೋದಲ್ಲಿ ಡಿ.ಕೆ.ಶಿವಕುಮಾರ ಹೆಸರು ಉಲ್ಲೇಖಕುರಿತು ಮಾತನಾಡಿದ ಅವರು, ಡಿಕೆಶಿ ಹೆಸರು ಪ್ರಸ್ತಾಪ ಆಗಿರುವುದು ತಿಳಿದಿದೆ. ಆಡಿಯೋದಲ್ಲಿ ಹೆಸರಿದೆ ಅಂತ ಅವರು ಆರೋಪಿಯಲ್ಲ . ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿ. ನನಗಾದ ಅನ್ಯಾಯ ಅವರಿಗೆ ಆಗಬಾರದು. ನನ್ನಂತೆ ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ನನ್ನ ಹಳೆಯ ಗೆಳೆಯ. ನನ್ನ ಕಷ್ಟ ಸುಖದಲ್ಲಿ ಕೂಡಿ ಬಂದವರು ಅವರು. ಅವರು ಇನ್ನೂ ಬೆಳೆಯಬೇಕು. ನಾನು
ಅವರ ಬಗ್ಗೆ ಆರೋಪ ಮಾಡುವುದಿಲ್ಲ. ಯಾವುದೇ ಸಾಕ್ಷಿ ಆಧಾರಗಳಿಲ್ಲದೆ ಏನೂ ಹೇಳುವುದಿಲ್ಲ.ಅವರಿಗೆ ಒಳ್ಳೆಯದಾಗಲಿ ಎಂದ ಅವರು, ನಾನು ಯಾರಿಗೂ ಕೆಟ್ಟದ್ದನ್ನು ಬಯಸಿಲ್ಲ. ನಾನು ನಿರಪರಾಧಿಯಾಗಿ ಹೊರಗೆ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯುವತಿಯ ದೂರು ಎಫ್ ಐ ಆರ್ ಆಗುತ್ತಿದ್ದಂತೆ ಆಕೆ ಕುಟುಂಬಸ್ಥರೊಂದಿಗೆ ಮಾತನಾಡಿರುವ ಆಡಿಯೋ ಬಿಡುಗಡೆಯಾಗಿದ್ದು, ಸಂಚಲನ ಮೂಡಿಸಿದೆ. ಅಲ್ಲದೇ ಈ ಮೊದಲೇ ರಮೇಶ್ ಜಾರಕಿಹೊಳಿ ತಮ್ಮ ಬಳಿ ಪ್ರಬಲ ಅಸ್ತ್ರವಿದ್ದು, ಅದನ್ನು ಬಿಟ್ಟರೆ ಮುಗಿಯಿತು ಎಂದಿದ್ದರು. ಈ ಹಿನ್ನಲೆ ನಾಳೆ ರಮೇಶ್ ಜಾರಕಿಹೊಳಿ ಏನು ಮಾಡುತ್ತಾರೆ ಎಂಬ ಕುತೂಹಲ ಮೂಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ