ಕೋಲಾರ: ಸಂಸದ ಎಸ್.ಮುನಿಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಸಂಸದರು ಬೆಂಗಳೂರಿನ ತಮ್ಮ ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.
ಶುಕ್ರವಾರ ಅನಾರೋಗ್ಯದಿಂದ ಬಳಲಿದ ಅವರು, ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಕೋವಿಡ್ ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.
ಶುಕ್ರವಾರ ಜಿಲ್ಲೆಗೆ ಆಗಮಿಸಿದ್ದ ಸಂಸದರು ಬಂಗಾರಪೇಟೆ ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ನಡೆದ ಡೇರಿ ಕಟ್ಟಡ ಮತ್ತು ಬಿಎಂಸಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
‘ಕಳೆದ ಕೆಲ ದಿನಗಳಲ್ಲಿ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಶೀಘ್ರವೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಕೊರೊನಾ ಸೋಂಕು ಇದ್ದರೆ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ