ಏರ್‌ ಇಂಡಿಯಾ ಶೇ.100 ಖಾಸಗೀಕರಣ: ನಿರ್ಧಾರ ಪ್ರಕಟಿಸಿದ ಸರ್ಕಾರ

ನವ ದೆಹಲಿ: ಏರ್ ಇಂಡಿಯಾದಲ್ಲಿ ಶೇ.100 ಹೂಡಿಕೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಪ್ರಕಟಿಸಿದ್ದಾರೆ.
ಏರ್ ಇಂಡಿಯಾದಲ್ಲಿ ಶೇ. 100 ಹೂಡಿಕೆ ಮಾಡಲು ಅಂದರೆ ಖಾಸಗೀಕರಣದ ಮಾಡಲು ನಾವು ನಿರ್ಧರಿಸಿದ್ದೇವೆ. ಏರ್​ ಇಂಡಿಯಾ ವಿಮಾನಯಾನ ಸಂಸ್ಥೆಗೆ ಹೂಡಿಕೆ ಮಾಡುವುದು ಮತ್ತು ಮಾಡದಿರುವುದು ಈ ಎರಡೇ ಆಯ್ಕೆಗಳಿರುವುದರಿಂದ ಮುಚ್ಚುವುದರ ಬದಲಿಗೆ ಹೂಡಿಕೆ ಮಾಡುವುದನ್ನೇ ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಸಚಿವರು ತಿಳಿಸಿದರು.
ಏರ್ ಇಂಡಿಯಾದ ಒಟ್ಟು ಸಾಲ 60,000 ಕೋಟಿ ರೂ. ಇದೆ. ಏರ್ ಇಂಡಿಯಾದಲ್ಲಿ ಹೂಡಿಕೆಗಾಗಿ ಮುಂದಿನ ದಿನಗಳಲ್ಲಿ ಹಣಕಾಸಿನ ಹರಾಜು ಪ್ರಕ್ರಿಯೆಗೆ ಖಾಸಗಿ ಕಂಪನಿಗಳನ್ನು ಆಹ್ವಾನಿಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
“ಕಳೆದ ಸಭೆಯಲ್ಲಿ ಹರಾಜುದಾರರ ಶಾರ್ಟ್‌ಲಿಸ್ಟ್ ಮಾಡಲಾಗಿದೆ. 64 ದಿನಗಳಲ್ಲಿ ಹರಾಜುದಾರರು ಬರಬೇಕು ಎಂದು ತಿಳಿಸಲಾಗಿದೆ. ಹೂಡಿಕೆ ಮಾಡುವ ಬಗ್ಗೆ ಯಾವುದೇ ಹಿಂಜರಿಕೆ ಇಲ್ಲ. ಹೂಡಿಕೆ ಪ್ರಕ್ರಿಯೆ ಮೇ ಅಥವಾ ಜೂನ್ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದರು.
2007 ರಲ್ಲಿ ಇಂಡಿಯನ್ ಏರ್‌ಲೈನ್ಸ್‌ನೊಂದಿಗೆ ವಿಲೀನಗೊಂಡಾಗಿನಿಂದ ನಷ್ಟದಲ್ಲಿದ್ದ ಏರ್ ಇಂಡಿಯಾದ ಶೇ. 100 ರಷ್ಟು ಪಾಲನ್ನು ಮಾರಾಟ ಮಾಡುವ ಪ್ರಕ್ರಿಯೆಯನ್ನು ಸರ್ಕಾರ ಪ್ರಾರಂಭಿಸಿದೆ. ನಾವು ಏರ್​ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸಬೇಕು. ಇಲ್ಲವೇ ನಾವು ವಿಮಾನಯಾನ ಸಂಸ್ಥೆ ಮುಚ್ಚಬೇಕು.ಏರ್‌ ಇಂಡಿಯಾ ಪ್ರತಿದಿನ 20 ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿದೆ. ಅಸರ್ಪಕ ನಿರ್ವಹಣೆಯೇ ಈ ನಷ್ಟಕ್ಕೆ ಕಾರಣವಾಗಿದೆ. ಇ ಏರ್ ಇಂಡಿಯಾ ಸಂಸ್ಥೆ ಒಟ್ಟು 60,000 ಕೋಟಿ ರೂ.ಗಳ ಸಾಲದ ಸುಳಿಗೆ ಸಿಲುಕಿದೆ,’ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಏರ್ ಇಂಡಿಯಾ ಖಾಸಗೀಕರಣದ ಈ ಹಿಂದಿನ ಪ್ರಯತ್ನಗಳು ಯಶಸ್ವಿಯಾಗಲಿಲ್ಲ. ಏಕೆಂದರೆ ಪ್ರಯತ್ನಗಳು ಅರೆಮನಸ್ಸಿನಿಂದ ಕೂಡಿದ್ದವು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಲಾಲು ಕುಟುಂಬದಲ್ಲಿ ಬಿರುಗಾಳಿ ; ಹಿರಿಯ ಮಗನನ್ನು ಆರ್‌ ಜೆಡಿ ಪಕ್ಷ, ಕುಟುಂಬದಿಂದ ಹೊರಹಾಕಿದ ಲಾಲು ಪ್ರಸಾದ ಯಾದವ್‌...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement