ನೀನಾಸಂ ಕೆ.ವಿ.ಸುಬ್ಬಣ್ಣ ಪತ್ನಿ ಶೈಲಜಾ ನಿಧನ

ಸಾಗರ: ಸಾಗರ ತಾಲೂಕಿನ ಹೆಗ್ಗೋಡು ನೀನಾಸಂ ಸಂಸ್ಥೆಯ ಸಂಸ್ಥಾಪಕ ಕೆ.ವಿ.ಸುಬ್ಬಣ್ಣ ಅವರ ಪತ್ನಿ ಶೈಲಜಾ (೮೫) ಭಾನುವಾರ ಮುಂಡಿಗೇಸರ ಗ್ರಾಮದ ನಿವಾಸದಲ್ಲಿ ನಿಧನರಾದರು.
ಮೃತರು ಪುತ್ರ ಕೆ.ವಿ. ಅಕ್ಷರ ಹಾಗೂ ಕುಟುಂಬದ ಸದಸ್ಯರನ್ನು ಅಗಲಿದ್ದಾರೆ. ಕೆ.ವಿ.ಸುಬ್ಬಣ್ಣ ನೀನಾಸಂ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾಗ ಮನೆ ಹಾಗೂ ತೋಟದ ಜವಾಬ್ದಾರಿಯನ್ನು ಶೈಲಜಾ ಅವರೇ ನೋಡಿಕೊಳ್ಳುತ್ತಿದ್ದರು. ಅಲ್ಲದೇ ನೀನಾಸಂ ಸಂಸ್ಥೆಯ ಬೆಳವಣಿಗೆಯಲ್ಲಿ ಶೈಲಜಾ ಅವರ ಪಾತ್ರ ಮಹತ್ವದ್ದಾಗಿದೆ. ಮೃತರ ಅಂತ್ಯಕ್ರಿಯೆ ಭಾನುವಾರ ಹೆಗ್ಗೋಡಿನಲ್ಲಿ ಜರುಗಿತು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement