ಹಾವೇರಿ: ಹೋಳಿ ಆಡಿ ನದಿಗೆ ಇಳಿದ ಇಬ್ಬರು ಬಾಲಕರು ನೀರು ಪಾಲು

ಹಾವೇರಿ: ಹೋಳಿ ಹಬ್ಬದ ಪ್ರಯುಕ್ತ ನದಿಯಲ್ಲಿ ಸ್ನಾನ ಮಾಡಲು ಹೋದ ಇಬ್ಬರು ಬಾಲಕರು ಮೃತಪಟ್ಟ ಘಟನೆ ಹಾವೇರಿ ತಾಲೂಕಿನಲ್ಲಿ ಸಂಭವಿಸಿದೆ.
ಹಾವೇರಿ ತಾಲೂಕಿನ ನಾಗನೂರು ಗ್ರಾಮದಲ್ಲಿ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಹೇಶ್ ಮುಂಡಣ್ಣನವರ (೧೨) ಮತ್ತು ವೀರೇಶ್ ಅಕ್ಕಿವಳ್ಳಿ (೧೩) ಮೃತಪಟ್ಟಿದ್ದು, ಅವರ ಸೇಹಿತ ಯೋಗಿಶ್ ಅಕ್ಕಿವಳ್ಳಿ (೮) ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೋಳಿ ಹಬ್ಬದ ಪ್ರಯುಕ್ತ ಬಣ್ಣ ಆಟವಾಡಿ ಒಂದೆಡೆ ಗುಂಪಾಗಿ ಸೇರಿದ್ದ ಮಕ್ಕಳು ಸ್ನಾನ ಮಾಡಲು ನದಿಗೆ ತೆರಳಿದ್ದರು. ಮೂವರು ಗೆಳೆಯರು ನದಿಗೆ ಇಳಿದಿದ್ದರು. ಆದರೆ ಇವರಿಗೆ ಈಜಲು ಬರುತ್ತಿರಲಿಲ್ಲ. ಹೀಗಾಗಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಶಾಸಕ ವಿರೂಪಾಕ್ಷ ಬಳ್ಳಾರಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಹಾವೇರಿ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement