ಬೆಂಗಳೂರು: ಮಗಳು ಕೋರ್ಟ್ ಮುಂದೆ ಹಾಜರಾಗಿ ಹೇಳಿಕೆ ನೀಡುವುದು ಖಚಿತವಾಗುತ್ತಿದ್ದಂತೆ ಸಿಡಿ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಕಿಡಿಕಾರಿರುವ ಕಾಂಗ್ರೆಸ್, ವಿಜಯಪುರದ ಯುವತಿ ಪೋಷಕರು ಬೆಳಗಾವಿಯಲ್ಲಿ ಏಕಿದ್ದಾರೆ? ಮಗಳ ಹೇಳಿಕೆಗೆ ವಿರುದ್ಧವಾಗಿ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಪೋಷಕರು ಆರೋಪಿಯ ಕಸ್ಟಡಿಯಲ್ಲಿರುವಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಸರಣಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಯುವತಿ ಪೋಷಕರು ಯಾರ ಗನ್ ಪಾಯಿಂಟ್ನಲ್ಲಿದ್ದಾರೆ? ಯಾರ ಬೆದರಿಕೆಯಲ್ಲಿ ಮಾತಾಡುತ್ತಿದ್ದಾರೆ? ಯಾರು ಬರೆದುಕೊಟ್ಟ ಸ್ಕ್ರಿಪ್ಟ್ ಓದುತ್ತಿದ್ದಾರೆ? ಮಗಳ ಹೇಳಿಕೆಗೆ ವಿರುದ್ಧವಾಗಿ ಏಕೆ ಮಾತಾಡುತ್ತಿದ್ದಾರೆ? ಇದು ಪೋಷಕರು ಆರೋಪಿಯ ಕಸ್ಟಡಿಯಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಹೇಳಿದೆ.
ಎಸ್ಐಟಿ ಆರೋಪಿಯನ್ನು ರಕ್ಷಿಸುತ್ತಿದೆ. ಪೋಷಕರಿಗೆ ಬೆದರಿಕೆಯೊಡ್ಡಿ ಹೇಳಿಕೆ ಕೊಡಿಸಲಾಗುತ್ತಿದೆ. ಪೋಷಕರಿಗೆ ನಡೆದ ವಿಷಯದ ಬಗ್ಗೆ ತಿಳಿದಿಲ್ಲ. ನನಗೆ ರಕ್ಷಣೆ ಸಿಗುವ ಬಗ್ಗೆ ನಂಬಿಕೆ ಇಲ್ಲ ಎಂದು ಯುವತಿ ಹೇಳಿಕೆ ನಿಡಿದ್ದಾಳೆ. ಆದರೆ ಯುವತಿ ಪೋಷಕರು ಆರೋಪಿಯ ಒತ್ತಡದಲ್ಲಿ ಬೇರೆಯದ್ದೇ ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ