ಮಹಿಳೆಯರಿಗೆ ಗೌರವ ನೀಡದ ಕಮಲ್‌ ಹಾಸನ್‌ ಮಹಿಳೆಯರಿಗೆ ಹೇಗೆ ರಕ್ಷಣೆ ಕೊಡ್ತಾರೆ: ಬಿಜೆಪಿ ನಾಯಕಿ ವನತಿ ಶ್ರೀನಿವಾಸ ಪ್ರಶ್ನೆ

ಚೆನ್ನೈ: ಮಹಿಳೆಯರಿಗೆ ಗೌರವ ನೀಡದ ನಟ ಕಮಲ್‌ ಹಾಸನ್‌ ಅವರ ಮಕ್ಕಳ್‌ ನೀಧಿ ಮಾಯಮ್‌ ಪಕ್ಷ ಮಹಿಳೆಯರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಬಿಜೆಪಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ನನಗೆ ಅವಕಾಶ ನೀಡಿದ್ದಾರೆ. ಕಮಲ್‌ ಹಾಸನ್‌ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಮಹಿಳೆಯರಿಗೆ ಗೌರವ ನೀಡದ ಅವರು ಮಹಿಳೆಯರಿಗೆ ಹೇಗೆ ರಕ್ಷಣೆ ನೀಡುತ್ತಾರೆ ಎಂದು ಪ್ರಶ್ನಿಸಿದರು.
ಕಳೆದ ಐದು ವರ್ಷಗಳಲ್ಲಿ, ನಾನು ಮಾಡಿದ ಕಾರ್ಯವನ್ನು ಕಮಲ್‌ ಹಾಸನ್‌ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿರಲಿಲ್ಲ. ಕ್ಷೇತ್ರದ ಜನರಿಗೆ ನಾನು ಮಾಡಿದ ಕಲ್ಯಾಣ ಕ್ರಮಗಳನ್ನು ಮೊದಲು ತಿಳಿದುಕೊಂಡ ನಂತರ ಹೇಳಿಕೆ ನೀಡುವುದು ಸೂಕ್ತ. ಬಡತನ ಹಿನ್ನೆಲೆಯ ಮಹಿಳೆ ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಏರಿದರೆ, ಕಮಲ್‌ ಹಾಸನ್‌ ಅವಮಾನಿಸುವುದು ಸರಿಯಲ್ಲ.
ಕಮಲ್ ಹಾಸನ್ ಅವರು, ವನತಿ ಶ್ರೀನಿವಾಸನ್ ಅವರಂತಹ ತುಕ್ಕಡಾ ರಾಜಕಾರಣಿಗಳೊಂದಿಗೆ ಚರ್ಚಿಸುವುದಿಲ್ಲ. ಚುನಾವಣೆಯಲ್ಲಿ ಎರಡು ಬಾರಿ ಸೋತಿದ್ದ ಮತ್ತು ಮೂರನೆಯ ಬಾರಿಗೆ ಸೋಲುವ ತಯಾರಾಗುತ್ತಿರುವ ವನತಿ ಶ್ರೀನಿವಾಸನ್ ಅವರೊಂದಿಗೆ ಚರ್ಚಿಸಲು ಎಂಎನ್‌ಎಂ ವಿದ್ಯಾರ್ಥಿ-ವಿಭಾಗದ ಸದಸ್ಯರು ಸಾಕು ಎಂದು ಹೇಳಿಕೆ ನೀಡಿದ್ದರು.
ಒಂದೆರಡು ದಿನಗಳ ಹಿಂದೆ ತಮಿಳುನಾಡಿಗೆ ಆಗಮಿಸಿದ ಸ್ಮೃತಿ ಇರಾನಿ, ವನತಿ ಶ್ರೀನಿವಾಸನ್ ಪರ ಪ್ರಚಾರ ನಡೆಸಿದ್ದನ್ನು ಉಲ್ಲೇಖಿಸಿ ಕಮಲ್‌ ಹಾಸನ್‌ ಹೇಳಿಕೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪದ ಹೊಟೇಲ್‌ ನಲ್ಲಿ ಬೆಂಕಿ ಅವಘಡ : 6 ಮಂದಿ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement