ಸಿಡಿ ಪ್ರಕರಣ: ನನ್ನ ಮಗಳು ಬೇರೆಯವರ ಒತ್ತಡದಲ್ಲಿದ್ದಾಳೆ, ಅವಳು ನೀಡುವ ಹೇಳಿಕೆ ಪರಿಗಣಿಸಬೇಡಿ ಎಂದ ಯುವತಿ ತಂದೆ

ಬೆಳಗಾವಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದು, ನನ್ನ ಮಗಳು ಬೇರೆಯವರ ಒತ್ತಡಕ್ಕೆ ಸಿಲುಕಿದ್ದಾಳೆ. ಹೀಗಾಗಿ ಅವಳ ಹೇಳಿಕೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.
ನನ್ನ ಮಗಳನ್ನು ರಾಜಕೀಯ ದಾಳವಾಗಿ ಬಳಸಿಕೊಂಡಿದ್ದಾರೆ. ಮೊದಲು ನಮ್ಮ ಮಗಳು ಅಲ್ಲಿಂದ ಹೊರಬರಬೇಕು. ಆಕೆಯ ಮೇಲೆ ಡಿ.ಕೆ.ಶಿವಕುಮಾರ್ ಕಡೆಯವರು ಒತ್ತಡ ಹೇರಿ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ. ಮೊದಲು ಅವಳು ಒತ್ತಡದಿಂದ ಹೊರಬಂದು ಹೇಳಿಕೆಗಳನ್ನು ದಾಖಲಿಸಲಿ ಎಂದರು.
ನಾನು ಮಾಜಿ ಸೈನಿಕನಿರುವುದರಿಂದ ನನ್ನ ಮಗಳ ರಕ್ಷಣೆಗೆ ನಾನು ಬದ್ಧ. ಅವಳು ನಮ್ಮ ಬಳಿ ಇರಲು ಇಚ್ಚಿಸುವುದಾದರೆ ಅದೆಲ್ಲವನ್ನೂ ಬಿಟ್ಟು ನಮ್ಮ ಬಳಿ ಬರಲಿ. ನಾವು ಆಕೆಯನ್ನು ರಕ್ಷಿಸುತ್ತೇವೆ. ಒಂದು ವೇಳೆ ಅವಳು ನಮ್ಮ ಬಳಿ ಬರಲು ಇಚ್ಛಿಸುವುದಿಲ್ಲ ಎನ್ನುವುದಾದರೆ ಅದನ್ನು ಕೋರ್ಟ್ ಮುಂದೆ ಹೇಳಲಿ ನ್ಯಾಯಾಲಯವೇ ಅದನ್ನು ನಿರ್ಧರಿಸಲಿ ಎಂದು ಭಾವುಕರಾಗಿ ಹೇಳಿದರು.
ನನ್ನ ಮಗಳಿಗೆ ಡಿ.ಕೆ.ಶಿವಕುಮಾರ ಕಡೆಯವರು ಚಿತ್ರಹಿಂಸೆ ನೀಡಿ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ. ಆಕೆಯನ್ನು ಮೊದಲು ನಮಗೆ ಒಪ್ಪಿಸಿ. ನಾಲ್ಕು ದಿನಗಳ ಕಾಲ ಆಕೆಯನ್ನು ನಮ್ಮ ಬಳಿಗೆ ಕಳುಹಿಸಿ. ಬಳಿಕ ಆಕೆ ನೀಡುವ ಹೇಳಿಕೆಗಳನ್ನು ಪಡೆದುಕೊಳ್ಳಿ. ಆಕೆ ಒತ್ತಡದಲ್ಲಿ ನೀಡುವ ಹೇಳಿಕೆಯನ್ನು ಪರಿಗಣಿಸಬಾರದು ಎಂದು ಮನವಿ ಮಾಡಿದರು.

ಪ್ರಮುಖ ಸುದ್ದಿ :-   ವೀಡಿಯೊ...| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement