೧ರಿಂದ ೯ನೇ ತರಗತಿ ಮಕ್ಕಳಿಗೆ ಪರೀಕ್ಷೆ ರದ್ದು ನಿರ್ಧಾರ ಕೈಗೊಂಡಿಲ್ಲ:ಸಿಎಂ ಬಿಎಸ್‌ವೈ

ಬೆಂಗಳೂರು: ೧ರಿಂದ ೯ನೇ ತರಗತಿ ಮಕ್ಕಳಿಗೆ ಪರೀಕ್ಷೆ  ರದ್ದು ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆತಂಕ ಮೂಡಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಶಾಲೆ ಬಂದ್ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಯಾವುದೇ ಪರೀಕ್ಷೆಗಳನ್ನು ರದ್ದು ಮಾಡುವುದಿಲ್ಲ. ಉಳಿದ ತರಗತಿ ಪರೀಕ್ಷೆಗಳು ಶಾಲೆಗಳಿಗೆ ಬಿಟ್ಟ ವಿಚಾರವಾಗಿದೆ. ಚಿತ್ರಮಂದಿರಗಳಿಗೆ ಸದ್ಯಕ್ಕೆ ಯಾವುದೇ ನಿರ್ಬಂಧವನ್ನು ವಿಧಿಸಿಲ್ಲ. ಸಿನಿಮಾ ಹಾಲ್ ಗಳಿಗೆ ನೀಡಲಾದ ವಿನಾಯಿತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸಿನಿಮಾ ಹಾಲ್ ಗಳಲ್ಲಿ ಯಥಾಸ್ಥಿತಿ ಮುಂದುವರೆಯಲಿದೆ. . ಇಂದಿನಿಂದ 15 ದಿನ ಸತ್ಯಾಗ್ರಹ, ಚಳವಳಿ,ಸಮಾವೇಶ ಇತ್ಯಾದಿ ನಡೆಸುವಂತಿಲ್ಲ. ರಾಜಕೀಯ ಪಕ್ಷಗಳ ಸಮಾವೇಶಗಳಿಗೂ ನಿಯಮ ಅನ್ವಯವಾಗಲಿದೆ.ಕೊರೊನಾ ನಿಯಮಗಳನ್ನು ಉಲ್ಲಂಘಿಸಿದರೆ ಮದುವೆ ಛತ್ರಗಳನ್ನು ಬಂದ್ ಮಾಡಲಾಗುವುದು. ನಿಯಮ ಉಲ್ಲಂಘಿಸಿದ ಮಂಟಪಗಳನ್ನು ಆರು ತಿಂಗಳ ಕಾಲ ಬಂದ್ ಮಾಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಶಾಲೆ, ಕಾಲೇಜು ಬಂದ್ ಮಾಡುವುದಿಲ್ಲ. ಪರೀಕ್ಷೆ ಇಲ್ಲದೆ ಎಲ್ಲ ಮಕ್ಕಳನ್ನು ಪಾಸ್ ಮಾಡುವ ಬಗ್ಗೆ ನಿರ್ಧರಿಸಿಲ್ಲ. ಪರೀಕ್ಷೆ ನಡೆಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಎಂದಿನಂತೆ ಶಾಲೆ-ಕಾಲೇಜುಗಳು ಮುಂದುವರೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement