ಕರ್ನಾಟಕದಲ್ಲಿ ಮೂರು ಸಾವಿರ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಪ್ರಕರಣ… ಬೆಂಗಳೂರಿನದ್ದೇ ಸಿಂಹಪಾಲು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ ಹೊಸದಾಗಿ 2975 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಒಂದೇ ದಿನ ಒಂದೇ ದಿನ 21 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 9,92,779 ಕ್ಕೆ ಏರಿಕೆಯಾಗಿದ್ದು, ಇದುವರೆಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 12,541 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ ರಾಜ್ಯದಲ್ಲಿ 1262 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಾಗೂ ಇದುವರೆಗೆ ಬಿಡುಗಡೆಯಾದವರ ಸಂಖ್ಯೆ 9,54,678ಕ್ಕೆ ಏರಿದೆ.
ರಾಜ್ಯದಲ್ಲಿ 25,541 ಸಕ್ರಿಯ ಪ್ರಕರಣಗಳು ಇದ್ದು, 240 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 1984 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬೆಂಗಳೂರಿನಲ್ಲಿಯೇ ಬಹುತೇಕ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ 24 ತಾಸಿನಲ್ಲಿ 11 ಜನ ಸೋಂಕಿತರು ಮೃತಪಟ್ಟಿದ್ದು, 17,582 ಸಕ್ರಿಯ ಪ್ರಕರಣಗಳು ಇವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement