ಕೊಲ್ಲಾಪುರ ಮಹಾಲಕ್ಷ್ಮೀ ಮೊರೆ ಹೋದ ರಮೇಶ ಜಾರಕಿಹೊಳಿ

ಬೆಂಗಳೂರು: ಇತ್ತ ಸಿಡಿ ಪ್ರಕರಣ ಯುವತಿ ಬೆಂಗಳೂರಿನಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸುತ್ತಿದ್ದರೆ ಈ ಪ್ರಕರಣದ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ (ಮಾರ್ಚ್ 30) ಮಹಾರಾಷ್ಟ್ರದ ಕೊಲ್ಲಾಪುರ ಮಹಾಲಕ್ಷ್ಮೀ ದೇಗುಲಕ್ಕೆ ತೆರಳಿದ್ದರು. ದೇವರ ದರ್ಶನ ಪಡೆದು ರಮೇಶ್ ಜಾರಕಿಹೊಳಿ ವಾಪಸ್ ಹೊರಟಿದ್ದಾರೆ.
ಅರ್ಧ ಗಂಟೆಗಳ ಕಾಲ ದೇವಿಯ ಸನ್ನಿಧಾನದಲ್ಲಿದ್ದು ವಿಶೇಷ ಪೂಜೆ ಸಲ್ಲಿಸಿದ ಅವರು ಅನಂತರ ವಾಪಸ್ ಮರಳುತ್ತಿದ್ದಾರೆ. ರಾತ್ರಿ ಗೋಕಾಕನಲ್ಲಿ ಇರುತ್ತಾರೋ ಅಥವಾ ಬೆಂಗಳೂರಿಗೆ ಬರುತ್ತಾರೆಯೋ ಎಂಬುದು ಗೊತ್ತಾಗಿಲ್ಲ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ನಿಮ್ಮ ಕಾಮೆಂಟ್ ಬರೆಯಿರಿ

advertisement