ಸಿದ್ದರಾಮಯ್ಯ ಯಾರ ಕಾಲು ಹಿಡಿದು ಸಿಎಂ ಆದ್ರೂ ಎನ್ನುವುದು ಗೊತ್ತಿದೆ:ಕಟೀಲು

ಬೆಳಗಾವಿ: ರಾಜ್ಯದ ಮೂರು ಉಪ ಚುಣಾವಣೆ ನಡೆಯಲಿರುವ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟಿಲು ಹೇಳಿದರು.
ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಪಕ್ಷದ ಪೂರ್ವ ತಯಾರಿ ನಡೆದಿದೆ. ಇಂದು ಮಂಗಲಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು.
ಬಿಜೆಪಿ ಸಂಸದರು ಕೇಂದ್ರ ಸರಕಾರ ಗುಲಾಮರು ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಯಾರ ಗುಲಾಮರು ಎಂದು ದೇಶಕ್ಕೆ ಗೊತ್ತಿದೆ, ಅವರು ಯಾರು ಕಾಲ‌ ಹಿಡಿದು ಮುಖ್ಯಮಂತ್ರಿ ಆಗಿದ್ದಾರೆ ಎನ್ನುವುದೂ ಗೊತ್ತಿದೆ ಎಂದು ತಿರುಗೇಟು ನೀಡಿದರು.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಸಿಡಿ ಪ್ರಕರಣ ತನಿಖೆ ಹಂತದಲ್ಲಿದೆ, ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ಬಾಗಲಕೋಟೆ ಸಿಡಿ ಪ್ರಕರಣ ಯಾವ ರೀತಿ ತನಿಖೆ ಆಗಿದೆ ಎಂಬುದು ಗೊತ್ತಿದೆ ಎಂದರು.
ಸಿದ್ದರಾಮಯ್ಯ ಅವರಿಗೆ ಸಿಬಿಐ, ಐಟಿ, ಎಸ್ ಐಟಿ, ಮೇಲೆ ನಂಬಿಕೆ ಇಲ್ಲ‌ ಎಂಬುದಕ್ಕೆ ಉತ್ತರಿಸಿದ ಅವರು, ಅಷ್ಟಕ್ಕೂ ಅವರಿಗೆ ಅವರ ಮೇಲೆಯೇ ನಂಬಿಕೆ ಇಲ್ಲ ಎಂದು ಕಟೀಲು ಲೇವಡಿ ಮಾಡಿದರು.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement