ಬೆಳಗಾವಿ :ಉಪಚುನಾವಣೆಯಲ್ಲಿ ಮಂಗಲಾ ಅಂಗಡಿ ಜಯಭೇರಿ ಬಾರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ಮಂಗಳವಾರ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ದಿ.ಸುರೇಶ ಅಂಗಡಿ ಬೆಳಗಾವಿಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಿದ್ದಾರೆ. ರಾಜ್ಯಕ್ಕೆ ನಿರೀಕ್ಷೆಗಿಂತಲು ಹೆಚ್ಚಿನ ಯೋಜನೆಗಳನ್ನು ಸುರೇಶ ಅಂಗಡಿಯವರು ತಂದಿದ್ದಾರೆ. ಅವರು ನಮ್ಮನ್ನು ಇಷ್ಟು ಬೇಗ ಬಿಟ್ಟು ಹೋಗಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ಇದು ದಿ. ಸುರೇಶ ಅಂಗಡಿ ಮತ್ತು ಮಂಗಲಾ ಅಂಗಡಿ ಅವರ ಚುನಾವಣೆಯಲ್ಲ, ಕಾರ್ಯಕರ್ತರ ಚುಣಾವಣೆ ಇದಾಗಿದೆ. ಚುನಾವಣೆಯಲ್ಲಿ ಎರಡೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ನಾವು ಗೆಲ್ಲುತ್ತೇವೆ, ಬೇರೆ ಪಕ್ಷದ ಬಗ್ಗೆ ನಾವು ಮಾತನಾಡುವುದಿಲ್ಲ. ನಮ್ಮ ಅಭಿವೃದ್ಧಿ ಕೆಲಸಗಳನ್ನು ಇಟ್ಟುಕ್ಕೊಂಡು ನಾವು ಚುನಾವಣೆಗೆ ಇಳಿದಿದ್ದೇವೆ. ಕಮಲಕ್ಕೆ ಮತ ಹಾಕಿ, ಬಿಜೆಪಿ ಗೆಲ್ಲಿಸಿ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ