ಅಪರೇಶನ್‌ ಕಮಲ: ಸಿಎಂ ಬಿಎಸ್‌ವೈ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಯಾದಗಿರಿ : ಶಾಸಕರಿಗೆ ಹಣದ ಆಮಿಷ ಒಡ್ಡಿ ಆಪರೇಷನ್ ಕಮಲ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.
ಆಪರೇಷನ್ ಕಮಲ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ಎಫ್ಐಆರ್ ಗೆ ತಡೆ ಕೋರಿ ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿ ಪುರಷ್ಕರಿಸಿದ್ದ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ನಂತರ ಆಡಿಯೋ ಕೇಸ್ ಪ್ರಕರಣವು ಕಲಬುರಗಿ ಹೈಕೋರ್ಟ್‌ ಪೀಠದಿಂದ ಬೆಂಗಳೂರಿನ ಜನಪ್ರತಿನಿಧಿ ಕೋರ್ಟಿಗೆ ವರ್ಗಾವಣೆಯಾಗಿದ್ದು, ಅಲ್ಲಿ ಪ್ರಕರಣ ರದ್ದು ಕೋರಿದ ಬಿಎಸ್‌ವೈ ಅರ್ಜಿ ವಜಾ ಆಗಿದೆ. ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶ ನೀಡಿದೆ ಎಂದು ದೂರುದಾರ  ಶರಣಗೌಡ ಪಾಟೀಲ್ ಕಂದಕೂರ ತಿಳಿಸಿದ್ದಾರೆ.
ಈ ಕುರಿತು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ಪಾಟೀಲ್ ಕಂದಕೂರ ಬಿ.ಎಸ್.​ ಯಡಿಯೂರಪ್ಪ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೆ, ಈ ಕುರಿತು ಆಡಿಯೋ ಸಹ ಬಿಡುಗಡೆ ಮಾಡಿದ್ದರು.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement