ಸಿಡಿ ಯುವತಿ ಉಳಿದುಕೊಂಡಿದ್ದ ಪಿಜಿ ಸ್ಥಳ ಮಹಜರು

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತ ಯುವತಿಯನ್ನು ತನಿಖಾಧಿಕಾರಿ ಮತ್ತು ಅವರ ತಂಡ ಆರ್‌.ಟಿ.ನಗರಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ದೂರು ನೀಡಿರುವ ಯುವತಿ ಆರ್‍ಟಿನಗರದ ಪಿಜಿಯಲ್ಲಿ ವಾಸ್ತವ್ಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ತನಿಖಾಧಿಕಾರಿಗಳು ಅವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದರು.
ಯುವತಿ ದೂರಿನಲ್ಲಿ ರಮೇಶ್ ಜಾರಕಿಹೊಳಿ ದೆಹಲಿಯ ಕರ್ನಾಟಕ ಭವನದಿಂದ ವಿಡಿಯೋ ಕಾಲ್ ಮಾಡಿ ಮಾತನಾಡಿದರು. ಆಗ ನಾನು ಪಿಜಿಯಲ್ಲಿದ್ದೆ ಎಂದು ತಿಳಿಸಿದ್ದರು. ಈ ಕಾರಣಕ್ಕಾಗಿ ಮಹಜರು ನಡೆಸಲಾಯಿತು. ಈ ಸಂದರ್ಭದಲ್ಲಿ ಕೆಲವಷ್ಟು ಮಾಹಿತಿಗಳನ್ನು ಸಂಗ್ರಹಿಸಲಾಯಿತು. ಪಿಜಿ ಮಾಲೀಕರನ್ನು ಸಹ ವಿಚಾರಣೆ ನಡೆಸಿದ ತನಿಖಾಧಿಕಾರಿ ಯುವತಿ ಬಗ್ಗೆ ಅನೇಕ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.
ಸ್ಥಳ ಮಹಜರು ನಡೆದ ಆರ್‍ಟಿನಗರದ ಪಿಜಿಯೊಂದರ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಪಿಜಿಯಲ್ಲಿನ ಮಹಜರು ಮುಗಿದ ನಂತರ ಮಲ್ಲೇಶ್ವರಂ ಅಪಾರ್ಟ್‍ಮೆಂಟ್‍ವೊಂದಕ್ಕೆ ಯುವತಿಯನ್ನು ಮಹಜರುಗಾಗಿ ತನಿಖಾಧಿಕಾರಿಗಳು ಕರೆದುಕೊಂಡು ಹೋಗಲಿದ್ದಾರೆ ಎಂದು ತಿಳಿದುಬಂದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement