ಸಿಡಿ ಪ್ರಕರಣ; ಆರೋಪಿ ತಲೆಮರೆಸಿಕೊಳ್ಳಲು ಸರ್ಕಾರವೇ ಸಹಕರಿಸುತ್ತಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಆರೋಪಿ ತಲೆ ಮರೆಸಿಕೊಳ್ಳಲು ಸಹಕರಿಸುದು ಕಾನೂನಿನ ಪ್ರಕಾರ ಅಪರಾಧ. ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ತಲೆಮರೆಸಿಕೊಂಡು ಅಜ್ಞಾತವಾಸದಲ್ಲಿದ್ದಾರೆ. ಅವರಿಗೆ ಸರ್ಕಾರವೇ ಸಹಕರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ತೀವ್ರ ವಾಗ್ದಾಳಿ ನಡೆಸಿದೆ.
ಆರೋಪಿ ಬಂಧಿಸುವುದನ್ನು ಬಿಟ್ಟು ರಕ್ಷಣೆ ನೀಡುತ್ತಿರುವುದು ಕಾನೂನಿನ ಪ್ರಕಾರ ಅಪರಾಧ. ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ನೆರೆ ಬಂದಾಗ – ಸಂಪುಟವಿಲ್ಲದೆ ಪರದಾಟ, ಕೊರೊನಾ ಬಂದಾಗ – ಕೊರೊನಾ ಲೂಟಿಗೆ ಕಿತ್ತಾಟ, ಆರ್ಥಿಕ ಬಿಕ್ಕಟ್ಟಿನಲ್ಲಿ – ಖಾತೆ ಕಿತ್ತಾಟ, ಬೆಲೆ ಏರಿಕೆಯ ಸಂದರ್ಭದಲ್ಲಿ – ಸಿಡಿ ಕಳ್ಳಾಟ, ಕೊರೊನಾ 2ನೇ ಅಲೆ ಹೆಚ್ಚಿದೆ – ದೂರು, ಪ್ರತಿ ದೂರಿನ ರಂಪಾಟ ಇವರಿಗೆ ಜನ ಹಿತಕ್ಕಿಂತ ಸ್ವಹಿತವೇ ಮುಖ್ಯವಾಗಿದೆ ಎಂದು ಹರಿಹಾಯ್ದಿದೆ.
ಸಿಡಿ ಸರ್ಕಾರಕ್ಕೆ ಸಿಡಿ ಚಿಂತೆ, ಜನತೆಗೆ ಬದುಕು ಉಳಿಸಿಕೊಳ್ಳುವ ಚಿಂತೆ. ಬಿಜೆಪಿ vs ಬಿಜೆಪಿ ಕಿತ್ತಾಟದಲ್ಲೇ ಮುಳುಗಿರುವ ಸರ್ಕಾರಕ್ಕೆ ರಾಜ್ಯದಲ್ಲಿನ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇಲ್ಲವಾಗಿದೆ. ಹಲವು ದಿನಗಳಿಂದ ಸಾರಿಗೆ ನೌಕರರ ಬಿಕ್ಕಟ್ಟು ದಿನೇ ದಿನೇ ಹೆಚ್ಚುತ್ತಿದ್ದರೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕಣ್ಮುಚ್ಚಿಕೊಂಡು ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement