ಕರ್ನಾಟಕದಲ್ಲಿ ಶನಿವಾರವೂ ನಾಲ್ಕು ಸಾವಿರ ದಾಟಿದ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಸೋಂಕು ಪ್ರಕರಣಗಳ ಏರಿಕೆ ಮುಂದುವರೆದಿದ್ದು ಸತತ ನಾಲ್ಕನೇ ದಿನವೂ ಹೊಸ ಪ್ರಕರಣಗಳು ನಾಲ್ಕುಸಾವಿರ ದಾಟಿದೆ.
ಬೆಂಗಳೂರು ನಗರದಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಮೂರು ಸಾವಿರ ದಾಟಿದೆ.
ಕೊರೊನಾದಿಂದ ಸಾವನ್ನಪ್ಪುವರ ಸಂಖ್ಯೆಯು ಹೆಚ್ಚಾಗಿದೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 19ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಶನಿವಾರ 4373 ಜನರಿಗೆ ಸೊಂಕು ದೃಢ ಪಟ್ಟಿದೆ. 1959 ಸೋಂಕಿತರು ಗುಣಮುಖರಾಗಿದ್ದಾರೆ. ಹಾಗೆಯೇ 19 ಸೋಂಕಿತರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರ ಮುತ್ತು ಮೈಸೂರಿನಲ್ಲಿ ತಲಾ ಆರು ಮಂದಿ ಸೋಂಕಿತರು ಕೊರೊನಾದಿಂದ ಮೃತಪಟ್ಟಿದ್ದಾರೆ. ಹಾಗೆಯೇ ಹಾಸನದಲ್ಲಿ ಮೂವರು ಸೋಂಕಿತರು, ಮಂಡ್ಯದಲ್ಲಿ ಇಬ್ಬರು , ಕಲಬುರಗಿ ಮತ್ತು ತುಮಕೂರಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಮರಣ ಸಂಭವಿಸಿಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು ರಾಜ್ಯದಲ್ಲಿ  ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1010602ಕ್ಕೆ ಏರಿಕೆಯಾಗಿದೆ. ಒಟ್ಟು 961359 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 36,614 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿನಿಂದ ಈವರೆಗೆ 12610 ಜನ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ 327 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 3002 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದೆ.
ಜಿಲ್ಲಾ ವಾರು ಸೊಂಕಿತರ ವಿವರ:ಬಾಗಲಕೋಟೆ 08, ಬೆಳಗಾವಿ 30, ಬೆಂಗಳೂರು ಗ್ರಾಮಾಂತರ 54, ಬೀದರ್ 172, ಬಳ್ಳಾರಿ 23, ಚಿಕ್ಕಬಳ್ಳಾಪುರ 13, ಚಿಕ್ಕಮಗಳೂರು 36, ಚಿತ್ರದುರ್ಗ 14, ದಕ್ಷಿಣ ಕನ್ನಡ 83, ದಾವಣಗೆರೆ 29, ಧಾರವಾಡ 39, ಗದಗ 09, ಚಾಮರಾಜನಗರ 18, ಹಾಸನ 59, ಹಾವೇರಿ 04, ಕಲಬುರಗಿ 151, ಕೊಡಗು 11, ಕೋಲಾರ 13, ಕೊಪ್ಪಳ 32, ಮಂಡ್ಯ 36, ಮೈಸೂರ171, ರಾಯಚೂರು 19, ರಾಮನಗರ 07, ಶಿವಮೊಗ್ಗ 36, ತುಮಕೂರು 167, ಉಡುಪಿ 53, ಉತ್ತರ ಕನ್ನಡ 29, ವಿಜಯಪುರ 18, ಯಾದಗಿರಿ 13.

ಪ್ರಮುಖ ಸುದ್ದಿ :-   ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement