
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಸಾಹುಕಾರ ಅವರನ್ನು ನೇಮಕ ಮಾಡಲಾಗಿದೆ.
ಆಯೋಗದ ಸದಸ್ಯರಾಗಿದ್ದ ಸಾಹುಕಾರ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶಿಸಿದ್ದಾರೆ. ರಾಯಚೂರ ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನಾಳ ಗ್ರಾಮದ ಶಿವಶಂಕರಪ್ಪ ೨೦೧೯ರಲ್ಲಿ ಆಯೋಗದ ಸದಸ್ಯರಾಗಿ ನೇಮಕ ಗೊಂಡಿದ್ದರು. ಕೃಷಿ ಎಂಜಿನೀಯರಿಂಗ್ ಪದವಿಧರರಾಗಿರುವ ಸಾಹುಕಾರ ಅವರ ಅಧಿಕಾರಾವಧಿ ಇನ್ನೂ ಮೂರು ವರ್ಷವಿದೆ. ನಿವೃತ್ತ ಐಎಎಸ್ ಅಧಿಕಾರಿ ಷಡಾಕ್ಷರಿ ಸ್ವಾಮಿ ಅವರು ಆಯೋಗದ ಅಧ್ಯಕ್ಷರಾಗಿ ಶನಿವಾರ ನಿವೃತ್ತರಾದರು.



ನಿಮ್ಮ ಕಾಮೆಂಟ್ ಬರೆಯಿರಿ