ರಮೇಶ ಜಾರಕಿಹೊಳಿಗೆ ಕೊರೊನಾ ಹೀಗಾಗಿ ಪ್ರಚಾರಕ್ಕೆ ಬಂದಿಲ್ಲ ಎಂದ ಬೈರತಿ

ಬೆಳಗಾವಿ :ಮಾಜಿ ಸಚಿವ ರಮೇಶ ಜಾರಕಿಹೊಳಿಯವರು ಕೊರೋನಾ ಸೋಂಕು ತಗುಲಿರುವ ಕಾರಣ ಬೆಳಗಾವಿ ಲೋಕಸಭಾ ಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದಾರೆ ಎಂದು ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹುಷಾರಾದ ನಂತರ ಚುನಾವಣಾ ಪ್ರಚಾರಕ್ಕೆ ಬರುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರಮೇಶ ಜಾರಕಿಹೊಳಿ‌ ಬೆಂಗಳೂರಿನಲ್ಲಿಯೇ ಇದ್ದಾರೆ, ಕೇವಲ ಚುನಾವಣಾ ಪ್ರಚಾರ ಕುರಿತು ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿದ್ದೇನೆ. ರಮೇಶ್ ಜಾರಕಿಹೊಳಿ ಜೊತೆ ನಿನ್ನೆ ಫೋನ್‌ನಲ್ಲಿ ಮಾತನಾಡಿದ್ದೇನೆ ಎಂದು ಹೇಳಿದರು.
ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಇನ್ನೆರಡು ದಿನಗಳಲ್ಲಿ ಪ್ರಚಾರಕ್ಕೆ ಬರಲಿದ್ದಾರೆ ಎಂದೂ ಹೇಳಿದರು.
ಸಿಡಿ ತನಿಖೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ ಜಾರಕಿಹೊಳಿ ಎಸ್ ಐಟಿ ತನಿಖೆಗೂ ಅನಾರೋಗ್ಯದ ಕಾರಣ ನೀಡಿ ದೂರ ಉಳಿದಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement