ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ:ಸಿಎಂ ಬಿಎಸ್‌ವೈ

ಬೆಳಗಾವಿ : ಸದ್ಯ ರಾಜ್ಯ ಎದುರಿಸುತ್ತಿರುವ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರು ಮುಂದಿಟ್ಟಿರುವ 6 ನೇ ವೇತನ ಆಯೋಗ ಜಾರಿ ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
6 ನೇ ವೇತನ ಆಯೋಗ ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿ ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಯಲ್ಲಿ 6 ನೇ ವೇತನ ಆಯೋಗ ಜಾರಿ ಮಾಡಲು ಸಾಧ್ಯವಿಲ್ಲ, ನಾವು ಒಂಭತ್ತು ಬೇಡಿಕೆಗಳಲ್ಲಿ ಎಂಟನ್ನು ಈಡೇರಿಸಿದ್ದೇವೆ. ಹೀಗಾಗಿ ನಾನು ಅವರಿಗೆ ಹಠಮಾರಿ ಧೋರಣೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು. ಜನರ ಹಿತದೃಷ್ಟಿಯಿಂದ ಕೆಲಸ ಮಾಡಬೇಕು. ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಅವಕಾಶ ನೀಡಬೇಡಿ ಎಂದು ಮನವಿ ಮಾಡಿದ್ದಾರೆ. ಸರ್ಕಾರ ಮುಷ್ಕರ ನಡೆಸಿದರೆ ಬೇಕಾದ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದೆ. ಕಾಸಗಿ ಬಸ್‌ ಹಾಗೂ ರೈಲೆ ವ್ಯವಸ್ಥೆ ಕೂಡ ಮಾಡಲಾಗಿದೆ . ಉದ್ದೇಶಪೂರ್ವಕವಾಗಿ ಮುಷ್ಕರ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement