ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ: 32 ಸಾವಿರ ಖಾಸಗಿ ವಾಹನ ರಸ್ತೆಗೆ 

ಉಡುಪಿ: ಸಾರಿಗೆ ನೌಕರರು ಬುಧವಾರ (ಏ.೭)ದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಮೇರೆಗೆ ವಿವಿಧ ಜಿಲ್ಲೆಗಳಲ್ಲಿ ಖಾಸಗಿ ವಾಹನಗಳನ್ನು ಓಡಿಸಲು ಸರ್ಕಾರ ತೀರ್ಮಾನಿಸಿದೆ.ಇದಕ್ಕಾಗಿ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಖಾಸಸಗಿ ಬಸ್‌ಗಳ ಪ್ರವೇಶಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಈ ಮಧ್ಯೆ ಮಂಗಳವಾರ ಉಡುಪಿಯಲ್ಲಿ ಖಾಸಗಿ ಬಸ್ ಒಕ್ಕೂಟದ ರಾಜ್ಯ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸರ್ಕಾರದ ನಿರ್ಧಾರದ ಹಿನ್ನಲೆಯಲ್ಲಿ 32,000 ಖಾಸಗಿ ವಾಹನಗಳನ್ನು ರಸ್ತೆಗೆ ಇಳಿಸುತ್ತೇವೆ” ಎಂದು ಹೇಳಿದರು.
ಬುಧವಾರದಿಂದ 8 ಸಾವಿರ ಖಾಸಗಿ ಬಸ್ಗಳು, 20 ಸಾವಿರ ಮ್ಯಾಕ್ಸಿ ಕ್ಯಾಬ್ ಓಡಾಟ ನಡೆಸಲಿದೆ. 4000 ಸ್ಟೇಜ್ ಕ್ಯಾರೇಜ್ ವಾಹನಗಳು ರಸ್ತೆಗೆ ಇಳಿಯಲಿವೆ ಎಂದರು.
ರಾಜ್ಯಾದ್ಯಂತ 60:40 ಅನುಪಾತ ಜಾರಿಗೆ ತನ್ನಿ, ಉತ್ತರ ಕರ್ನಾಟಕದಲ್ಲಿ ಸರಕಾರಿ ಬಸ್ ಏಕಸ್ವಾಮ್ಯತೆ ಇದೆ. ಖಾಸಗಿ ವಾಹನಗಳಿಗೆ ಪರವಾನಿಗೆ ಕೊಡಿ, ರಾಜ್ಯಾದ್ಯಂತ ಖಾಸಗೀಕರಣ ವ್ಯವಸ್ಥೆ ಜಾರಿಗೆ ತನ್ನಿ. ಇದರಿಂದ ಸರಕಾರಕ್ಕೆ ತೆರಿಗೆ ಸಂಗ್ರಹಕ್ಕೆ ಬಹಳ ಉಪಯೋಗವಾಗಲಿದೆ ಎಂದು ಹೇಳಿದರು.
ಮನವೊಲಿಕೆ ಯತ್ನ ಇಲ್ಲ “ಮುಷ್ಕರಕ್ಕೆ ಕರೆ ನೀಡಿರುವ ಸಾರಿಗೆ ನೌಕರರ ಮನವೊಲಿಕೆ ಯತ್ನ ಮಾಡುವುದಿಲ್ಲ. ಪರ್ಯಾಯ ಕ್ರಮಕ್ಕೆ ಸಿದ್ಧವಾಗಿದ್ದೇವೆ” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement