ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ಬುಧವಾರದಿಂದ (ಮಾ.೭ರಿಂದ) ಅನಿರ್ದಿಷ್ಟವಾಧಿ ಮುಷ್ಕರ ಆರಂಭಿಸುವುದರಿಂದ ಪ್ರಯಾಣಿಕರಿಗೆ ಬಸ್ಗಳು ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಸರ್ಕಾರವು ಈ ಬಗ್ಗೆ ಕ್ರಮಕ್ಕೆ ಮುಂದಾಗಿದ್ದು ಬೆಂಗಳೂರಿನಲ್ಲಿ ಪ್ರತಿ ೫ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ.
ಬಸ್ ಇಲ್ಲದೆ ಸಾರ್ವಜನಿಕರು ಪರದಾಡಬಾರದು ಎಂಬ ದೃಷ್ಟಿಯಿಂದ ಸರ್ಕಾರ ಈ ಕ್ರಮಕ್ಕರೆ ಮುಂದಾಗಿದ್ದು ಹೀಗಾಗಿ ಬೆಂಗಳೂರಿನಲ್ಲಿ ಪ್ರತಿ ೫ ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ. ಮೆಟ್ರೋ ರೈಲು ಬೆಳಗ್ಗೆ ೭ಗಂಟೆಯಿಂದ ರಾತ್ರಿ ೯ಗಂಟೆಯ ವರೆಗೆ ಮೆಟ್ರೋ ಓಡಾಡಲಿದೆ ಎಂದು ತಿಳಿಸಲಾಗಿದೆ. ಇದಲ್ಲದೆ ದೂರದ ಪ್ರಯಾಣ ಮಾಡುವವರಿಗೆ ಹೆಚ್ಚವರಿ ರೈಲೆಗಳನ್ನು ಓಡಿಸುವಂತೆ ರೈಲ್ವೆ ಇಲಾಖೆಯನ್ನು ಕೇಳಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ