ಕೇಂದ್ರ ಸಚಿವ ಜೋಶಿ ಮನೆ ಎದುರು ಮಹಿಳೆ ಆತ್ಮಹತ್ಯೆಗೆ ಯತ್ನ..

ಹುಬ್ಬಳ್ಳಿ:ಬಿದ್ದ ಮನೆಯ ಪರಿಹಾರಕ್ಕಾಗಿ ಅಲೆದು ಅಲೆದು ಸುಸ್ತಾದ ಮಹಿಳೆಯೊಬ್ಬರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಎದುರು ಡೆತ್ ನೋಟ್ ಬರೆದಿಟ್ಟು  ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.‌
ಧಾರವಾಡ ತಾಲೂಕಿನ ಗರಗ ಗ್ರಾಮದ ಶ್ರೀದೇವಿ ವೀರಪ್ಪ ಕಮ್ಮಾರ ಎಂಬ ಮಹಿಳೆಯೇ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ ಮಳೆಗಾಲದ ಸಮಯದಲ್ಲಿ ಅತಿವೃಷ್ಟಿಯಿಂದ ಮನೆ ಬಿದಿದ್ದು, ಅದರ ಪರಿಹಾರಕ್ಕಾಗಿ ಕಳೆದ ಐದು ತಿಂಗಳಿಂದ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಹತ್ತಿರ ಹೋಗಿ ಕೇಳಿದ್ದಾರೆ.  ಅವರು ಸಂಸದರ ಕಡೆ ಹೋಗಲು ಹೇಳಿದ್ದಾರೆ. ಕೇಂದ್ರ ಸಚಿವರ ಮನೆಗೂ ಹಲವು ಸಾರಿ ಮನೆ ಪರಿಹಾರ ಕೇಳಿದ್ದಾರೆ. ಅವರು ಕೂಡ ಸರಿಯಾಗಿ ಸ್ಪಂದಿಸಿಲ್ಲ ಎಂದು ಮನನೊಂದ ಶ್ರೀದೇವಿ ಅವರು ಮಂಗಳವಾರ ಕೇಂದ್ರ ಸಚಿವರ ಮನೆ ಎದುರು ಡೆತ್ ನೋಟ್ ಬರೆದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ‌. ತೀವ್ರವಾಗಿ ಅಸ್ವಸ್ಥಗೊಂಡ ಇವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement