ಸಾರಿಗೆ ಮುಷ್ಕರ: ಕರ್ನಾಟಕ ವಿವಿ ಕೆಲ ಪರೀಕ್ಷೆಗಳು ಮುಂದೂಡಿಕೆ

ಧಾರವಾಡ : ರಾಜ್ಯ ರಸ್ತೆ ಸಾರಿಗೆ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರದ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕರ್ನಾಟಕ ವಿಶ್ವ ವಿದ್ಯಾಲಯ  ಏಪ್ರಿಲ್‌ 8 ಹಾಗೂ 9ರಂದು ನಡೆಯಲಿರುವ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.
ದಿನಾಂಕ 08-04-2021 ಮತ್ತು 09-04-2021ರಂದು ನಡೆಯಲಿರುವ ಎಲ್ಲ ಸ್ನಾತಕ ಕೋರ್ಸುಗಳ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ ಪ್ರಕಟನೆಯಲ್ಲಿ ತಿಳಿಸಿದೆ.
ಈ ಕುರಿತಂತೆ ಕರ್ನಾಟಕ ವಿವಿ ಕುಲಸಚಿವರು(ಮೌಲ್ಯಮಾಪನ) ಪ್ರೊ.ರವೀಂದ್ರನಾಥ್ ಕದಂ ಸುತ್ತೋಲೆ ಹೊರಡಿಸಿ ಈ ಮೂಲಕ ಎಲ್ಲಾ ಮಹಾವಿದ್ಯಾಲಯಗಳ ಪ್ರಾಚಾರ್ಯರಿಗೆ, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ತಿಳಿಸಿದ್ದು, ರಾಜ್ಯದ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಲು ತೊಂದರೆ ಆಗಲಿದೆ.
ಹೀಗಾಗಿ ದಿನಾಂಕ 08-04-2021 ಮತ್ತು ದಿನಾಂಕ 09-04-2021ರಂದು ನಡೆಯಲಿರುವ ಎಲ್ಲ ಸ್ನಾತಕ ಕೋರ್ಸುಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಪರೀಕ್ಷೆಗಳನ್ನು ಮುಂದೆ ನಡೆಸುವ ದಿನಾಂಕಗಳನ್ನು ನಂತರ ತಿಳಿಸಲಾಗುವುದು. ದಿನಾಂಕ 12-04-2021ರಿಂದ ಈ ಮೊದಲಿನ ವೇಳಾಪಟ್ಟಿಯಲ್ಲಿ ತಿಳಿಸಿದ ಷರತ್ತುಗಳನ್ವಯ ಎಲ್ಲಾ ಪರೀಕ್ಷೆಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement