ಕರ್ನಾಟದಲ್ಲಿ ಬೆಂಗಳೂರಿನಲ್ಲೇ ಶೇ.72ರಷ್ಟು ಕೊರೊನಾ ಪ್ರಕರಣಗಳು.. 46 ಜನರ ಸಾವು

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಕೊರೋನಾ ದೈನಂದಿನ ಸೋಂಕಿನಲ್ಲಿ ದಿಢೀರ್‌ ಹೆಚ್ಚಳವಾಗಿದ್ದು, ಒಂದೇ ದಿನ 7955 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದು ಈ ವರ್ಷದ ಅತಿ ಹೆಚ್ಚು ದೈನದಿನ ಪ್ರಕರಣವಾಗಿದೆ. ಒಟ್ಟು 46 ಜನ ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,48,085 ಕ್ಕೆ ಏರಿಕೆಯಾಗಿದೆ. ಇದುವರೆಗೆ ಮೃತಪಟ್ಟವರ ಸಂಖ್ಯೆ 12,813 ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಶುಕ್ರವಾರ 3220 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,77,169 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ರಾಜ್ಯದಲ್ಲಿ ಬರೋಬ್ಬರಿ 58,084 ಸಕ್ರಿಯ ಪ್ರಕರಣಗಳು ಇದ್ದು, 378 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಫೋಟವಾಗಿದ್ದು, 5576 ಜನರಿಗೆ ಸೋಂಕು ತಗುಲಿದೆ. 29 ಜನ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 42,525 ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ ಕರ್ನಾಟಕದ ಒಟ್ಟು ದೈನಂದಿನ ಪ್ರಕರಣದಲ್ಲಿ ಬೆಂಗಳೂರಿನಲ್ಲಿಯೇ ಶೇ.72ರಷ್ಟು ಪ್ರಕರಣಗಳು ದಾಖಲಾಗುತ್ತಿವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement