ನಾಳೆಯಿಂದ ಎಂಟು ಜಿಲ್ಲೆಗಳಲ್ಲಿ ಕೊರೊನಾ ರಾತ್ರಿ ಕರ್ಫ್ಯೂ: ಯಾವುದಕ್ಕೆ ನಿರ್ಬಂಧ

ಬೆಂಗಳೂರು:ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕೊರೊನಾ ನಾಳೆ ರಾತ್ರಿಯಿಂದ ಕೊರೊನಾ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ.
ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ , ಪಬ್, ಸಿನಿಮಾ ಮಂದಿರ ಬಂದ್ ಆಗಲಿವೆ. ನಾಳೆ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆ ವರೆಗೆ ರಾಜಧಾನಿ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಕಲಬುರಗಿ, ತುಮಕೂರು, ಕಲಬುರಗಿ ಜಿಲ್ಲೆಗಳಲ್ಲಿ ನಗರಕ್ಕೆ ಮಾತ್ರ ಸೀಮಿತವಾಗುತವಂತೆ ಕರ್ಫ್ಯೂ ಜಾರಿಯಾಗಲಿದೆ.
ಒಟ್ಟು 10 ದಿನಗಳ ಕಾಲ ಕೊರೊನಾ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 10ರಿಂದ 5 ಗಂಟೆವರೆಗೆ ಬಾರ್, ರೆಸ್ಟೋರೆಂಟ್, ಪಬ್, ಡಿಸ್ಕೋತೆಕ್, ಸಿನಿಮಾ ಮಂದಿರಗಳು, ನಾಟಕ ಮಂದಿರಗಳು, ಕೈಗಾರಿಕೆ, ಗಾರ್ಮೆಂಟ್ಸ್, ಹೋಟೆಲ್, ಕ್ಲಬ್‍ಗಳು, ರಸ್ತೆಬದಿ ವ್ಯಾಪಾರ, ಗುಂಪು ಗೂಡುವುದು, ಸಭೆ-ಸಮಾರಂಭ, ಮದುವೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಕಡಿವಾಣ ಬೀಳಲಿದೆ
ಶುಕ್ರವಾರ ಸಂಜೆಯೊಳಗೆ ಸರ್ಕಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಿದ್ದು, ಬಸ್ ಸೇರಿದಂತೆ ಇತರೆ ವಾಹನಗಳ ಸಂಚಾರಕ್ಕೆ ನಿರ್ಬಂಧವಿರುವುದಿಲ್ಲ. ಸರ್ಕಾರಿ , ಖಾಸಗಿ, ಬಸ್‍ಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡೇ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಬೇಕು. ಸಾಮರ್ಥ್ಯಕ್ಕಿಂತ ಹೆಚ್ಚು ಜನರಿಗೆ ಅವಕಾಶವಿರುವುದಿಲ್ಲ.
ಉಳಿದಂತೆ ಇತರೆ ಜಿಲ್ಲಾ ಭಾಗಗಳಲ್ಲೂ ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಲಿದ್ದು, ಅಪ್ಪಿತಪ್ಪಿ ಯಾರಾದರೂ ಉಲ್ಲಂಘನೆ ಮಾಡಿದರೆ ಅಂಥವರ ವಿರುದ್ಧ ವಿಪ್ಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ಸರ್ಕಾರ ಸೂಚನೆ ಕೊಟ್ಟಿದೆ. ಕೊರೊನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಬೇಕೆಂದು ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳಿಗೂ ಸೂಚನೆ ಕೊಟ್ಟಿರುವುದರಿಂದ, ಈ ಬಾರಿ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಸಂದರ್ಭದಲ್ಲಿ ಆಸ್ಪತ್ರೆ, ಅಂಬುಲೆನ್ಸ್, ಬಸ್ ಸಂಚಾರ, ಹಣ್ಣು, ಹಾಲು, ತರಕಾರಿ, ಔಷಧಿ ಅಂಗಡಿಗಳು ಎಂದಿನಂತೆ ಇರಲಿವೆ.
ಬಾರ್ ಮತ್ತು ರೆಸ್ಟೋರೆಂಟ್, ಡಿಸ್ಕೊತೆಕ್, ಪಬ್, ಕ್ಲಬ್‍ಗಳು, ಗಾರ್ಮೆಂಟ್ಸ್,ಕೈಗಾರಿಕೆಗಳು, ಹೋಟೆಲ್‍ಗಳು, ಸಭೆ-ಸಮಾರಂಭ, ಧಾರ್ಮಿಕ ಕಾರ್ಯಕ್ರಮಗಳು, ಔತಣಕೂಟಗಳು, ಮಾಲ್‍ಗಳು, ಮಾರುಕಟ್ಟೆ, ಬಸ್ ನಿಲ್ದಾಣ, ಜನನಿಬಿಡ ಪ್ರದೇಶಗಳಲ್ಲಿ ನಿರ್ಬಂಧ ಇರುತ್ತದೆ.
ರಾಜಧಾನಿ ಬೆಂಗಳೂರಿನಲ್ಲಿ ನಾಳೆ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ಇಡೀ ನಗರ ಸ್ತಬ್ದಗೊಳ್ಳಲಿದೆ. ಪ್ರಮುಖವಾಗಿ ಅತ್ಯಂತ ಜನನಿಬಿಡ ಪ್ರದೇಶಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಬಿಎಂಟಿಸಿ ಬಸ್ ನಿಲ್ದಾಣ, ಶಾಂತಿನಗರ, ಸ್ಯಾಟ್‍ಲೈಟ್ ಬಸ್ ನಿಲ್ದಾಣ, ಯಶವಂತಪುರ, ಶಿವಾಜಿನಗರ ಸೇರಿದಂತೆ ಪ್ರಮುಖ ಬಸ್ ನಿಲ್ದಾಣಗಳಲ್ಲೂ 10 ಗಂಟೆ ನಂತರ ಜನರು ಸೇರುವುದಕ್ಕೆ ನಿರ್ಬಂಧ ಹಾಕಲಾಗಿದೆ.
ನಗರಕ್ಕೆ ಸಂಪರ್ಕ ಕಲ್ಪಿಸುವ ಕೆಲವು ರಸ್ತೆಗಳು ಕೂಡ ಬಂದ್ ಆಗಲಿದ್ದು, ಮುಖ್ಯವಾಗಿ ತುಮಕೂರು ರಸ್ತೆಯಿಂದ ಗೊರಗುಂಟೆಪಾಳ್ಯ, ಯಲಹಂಕ ರಸ್ತೆ, ಹೊಸಕೋಟೆ, ಬಿಡದಿ ಸೇರಿದಂತೆ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಬಹುತೇಕ ಎಲ್ಲ ರಸ್ತೆಗಳನ್ನು ಬಂದ್ ಮಾಡಲಾಗುತ್ತದೆ. ಅಲ್ಲದೆ ನಗರದ ಒಳಗಡೆ ಇರುವ ಬಹುತೇಕ ಎಲ್ಲ ಪ್ರಮುಖ ರಸ್ತೆಗಳ ಫ್ಲೈಓವರ್‍ಗಳಿಗೆ ರಾತ್ರಿ 9.30ರಿಂದಲೇ ಬ್ಯಾರಿಕೇಡ್ ಅಳವಡಿಸಲಾಗುತ್ತದೆ. ಸಾರ್ವಜನಿಕರು ಸಂಚರಿಸದಂತೆ ಪೊಲೀಸರು ನಿರ್ಬಂಧ ಹಾಕಲಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು: ಕುದುರೆಯೊಂದರಲ್ಲಿ ಗ್ಲಾಂಡರ್ಸ್ ರೋಗ ಪತ್ತೆ ; ಡಿಜಿ ಹಳ್ಳಿ ನಿಷೇಧಿತ ವಲಯವೆಂದು ಘೋಷಣೆ

ಬೆಂಗಳೂರು:ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕೊರೊನಾ ನಾಳೆ ರಾತ್ರಿಯಿಂದ ನೈಟ್‌ ಕರ್ಫ್ಯೂ ಜಾರಿಯಾಗಲಿದೆ.
ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ , ಪಬ್, ಸಿನಿಮಾ ಮಂದಿರ ಬಂದ್ ಆಗಲಿವೆ. ನಾಳೆ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆ ವರೆಗೆ ರಾಜಧಾನಿ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಕಲಬುರಗಿ, ತುಮಕೂರು, ಕಲಬುರಗಿ ಜಿಲ್ಲೆಗಳಲ್ಲಿ ನಗರಕ್ಕೆ ಮಾತ್ರ ಸೀಮಿತವಾಗುತವಂತೆ ಕರ್ಫ್ಯೂ ಜಾರಿಯಾಗಲಿದೆ.
ಒಟ್ಟು 10 ದಿನಗಳ ಕಾಲ ಕೊರೊನಾ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 10ರಿಂದ 5 ಗಂಟೆವರೆಗೆ ಬಾರ್, ರೆಸ್ಟೋರೆಂಟ್, ಪಬ್, ಡಿಸ್ಕೋತೆಕ್, ಸಿನಿಮಾ ಮಂದಿರಗಳು, ನಾಟಕ ಮಂದಿರಗಳು, ಕೈಗಾರಿಕೆ, ಗಾರ್ಮೆಂಟ್ಸ್, ಹೋಟೆಲ್, ಕ್ಲಬ್‍ಗಳು, ರಸ್ತೆಬದಿ ವ್ಯಾಪಾರ, ಗುಂಪು ಗೂಡುವುದು, ಸಭೆ-ಸಮಾರಂಭ, ಮದುವೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಕಡಿವಾಣ ಬೀಳಲಿದೆ
ಶುಕ್ರವಾರ ಸಂಜೆಯೊಳಗೆ ಸರ್ಕಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಿದ್ದು, ಬಸ್ ಸೇರಿದಂತೆ ಇತರೆ ವಾಹನಗಳ ಸಂಚಾರಕ್ಕೆ ನಿರ್ಬಂಧವಿರುವುದಿಲ್ಲ. ಸರ್ಕಾರಿ , ಖಾಸಗಿ, ಬಸ್‍ಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡೇ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಬೇಕು. ಸಾಮರ್ಥ್ಯಕ್ಕಿಂತ ಹೆಚ್ಚು ಜನರಿಗೆ ಅವಕಾಶವಿರುವುದಿಲ್ಲ.
ಉಳಿದಂತೆ ಇತರೆ ಜಿಲ್ಲಾ ಭಾಗಗಳಲ್ಲೂ ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಲಿದ್ದು, ಅಪ್ಪಿತಪ್ಪಿ ಯಾರಾದರೂ ಉಲ್ಲಂಘನೆ ಮಾಡಿದರೆ ಅಂಥವರ ವಿರುದ್ಧ ವಿಪ್ಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ಸರ್ಕಾರ ಸೂಚನೆ ಕೊಟ್ಟಿದೆ. ಕೊರೊನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಬೇಕೆಂದು ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳಿಗೂ ಸೂಚನೆ ಕೊಟ್ಟಿರುವುದರಿಂದ, ಈ ಬಾರಿ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಸಂದರ್ಭದಲ್ಲಿ ಆಸ್ಪತ್ರೆ, ಅಂಬುಲೆನ್ಸ್, ಬಸ್ ಸಂಚಾರ, ಹಣ್ಣು, ಹಾಲು, ತರಕಾರಿ, ಔಷಧಿ ಅಂಗಡಿಗಳು ಎಂದಿನಂತೆ ಇರಲಿವೆ.
ಬಾರ್ ಮತ್ತು ರೆಸ್ಟೋರೆಂಟ್, ಡಿಸ್ಕೊತೆಕ್, ಪಬ್, ಕ್ಲಬ್‍ಗಳು, ಗಾರ್ಮೆಂಟ್ಸ್,ಕೈಗಾರಿಕೆಗಳು, ಹೋಟೆಲ್‍ಗಳು, ಸಭೆ-ಸಮಾರಂಭ, ಧಾರ್ಮಿಕ ಕಾರ್ಯಕ್ರಮಗಳು, ಔತಣಕೂಟಗಳು, ಮಾಲ್‍ಗಳು, ಮಾರುಕಟ್ಟೆ, ಬಸ್ ನಿಲ್ದಾಣ, ಜನನಿಬಿಡ ಪ್ರದೇಶಗಳಲ್ಲಿ ನಿರ್ಬಂಧ ಇರುತ್ತದೆ.
ರಾಜಧಾನಿ ಬೆಂಗಳೂರಿನಲ್ಲಿ ನಾಳೆ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ಇಡೀ ನಗರ ಸ್ತಬ್ದಗೊಳ್ಳಲಿದೆ. ಪ್ರಮುಖವಾಗಿ ಅತ್ಯಂತ ಜನನಿಬಿಡ ಪ್ರದೇಶಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಬಿಎಂಟಿಸಿ ಬಸ್ ನಿಲ್ದಾಣ, ಶಾಂತಿನಗರ, ಸ್ಯಾಟ್‍ಲೈಟ್ ಬಸ್ ನಿಲ್ದಾಣ, ಯಶವಂತಪುರ, ಶಿವಾಜಿನಗರ ಸೇರಿದಂತೆ ಪ್ರಮುಖ ಬಸ್ ನಿಲ್ದಾಣಗಳಲ್ಲೂ 10 ಗಂಟೆ ನಂತರ ಜನರು ಸೇರುವುದಕ್ಕೆ ನಿರ್ಬಂಧ ಹಾಕಲಾಗಿದೆ.
ನಗರಕ್ಕೆ ಸಂಪರ್ಕ ಕಲ್ಪಿಸುವ ಕೆಲವು ರಸ್ತೆಗಳು ಕೂಡ ಬಂದ್ ಆಗಲಿದ್ದು, ಮುಖ್ಯವಾಗಿ ತುಮಕೂರು ರಸ್ತೆಯಿಂದ ಗೊರಗುಂಟೆಪಾಳ್ಯ, ಯಲಹಂಕ ರಸ್ತೆ, ಹೊಸಕೋಟೆ, ಬಿಡದಿ ಸೇರಿದಂತೆ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಬಹುತೇಕ ಎಲ್ಲ ರಸ್ತೆಗಳನ್ನು ಬಂದ್ ಮಾಡಲಾಗುತ್ತದೆ. ಅಲ್ಲದೆ ನಗರದ ಒಳಗಡೆ ಇರುವ ಬಹುತೇಕ ಎಲ್ಲ ಪ್ರಮುಖ ರಸ್ತೆಗಳ ಫ್ಲೈಓವರ್‍ಗಳಿಗೆ ರಾತ್ರಿ 9.30ರಿಂದಲೇ ಬ್ಯಾರಿಕೇಡ್ ಅಳವಡಿಸಲಾಗುತ್ತದೆ. ಸಾರ್ವಜನಿಕರು ಸಂಚರಿಸದಂತೆ ಪೊಲೀಸರು ನಿರ್ಬಂಧ ಹಾಕಲಿದ್ದಾರೆ.

ಪ್ರಮುಖ ಸುದ್ದಿ :-   ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement