ಯತ್ನಾಳ ಕುರಿತ ಗೊಂದಲ ಬಗೆಹರಿಸದ ಅರುಣ ಸಿಂಗ್‌ ಹೇಳಿಕೆ

ಬೆಳಗಾವಿ :ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಪಕ್ಷದಿಂದ ಹೊರ ಹಾಕಿದರೆ ಅವರು ಸ್ವತಂತ್ರರಾಗುತ್ತಾರೆ. ಕೆಲವು ವಿಷಯಗಳನ್ನು ಮಾಧ್ಯಮದವರ ಮುಂದೆ ಹೇಳಲು ಆಗುವುದಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಬಿಜೆಪಿ ಶಾಸಕಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಲ್ಲಿ ಜೀರೋ. ಅವರ ಹೆಸರು ಇಲ್ಲಿ ಪ್ರಸ್ತಾಪ ಬೇಡ ಎಂದು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಕಾರಣಕ್ಕೆ ಬಿಜೆಪಿಯಿಂದ ಅವರನ್ನು ಹೊರ ಹಾಕುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು.
ಪಕ್ಷದಿಂದ ಹೊರ ಹಾಕುವಂತಹ ವ್ಯಕ್ತಿಯೇ ಅವರಾಗಿದ್ದಾರೆ ಎಂದು ಹೇಳಿದ ಅವರು, ಯತ್ನಾಳ್ ಕುರಿತ ಪ್ರಶ್ನೆಗೆ ಅಸಮಾಧಾನ ವ್ಯಕ್ತಪಡಿಸಿದರು.
ಮಾಧ್ಯಮದವರಿಗೆ ಯತ್ನಾಳ್ ಬಗ್ಗೆ ನಂಬಿಕೆ ಇರಬಹುದು, ಆದರೆ ಬಿಜೆಪಿಗೆ ಅವರು ಜೀರೋ. ಯಡಿಯೂರಪ್ಪ ಬಗ್ಗೆ ಧ್ವನಿ ಎತ್ತಿರುವ ಕಾರಣಕ್ಕೆ ಈಗಾಗಲೇ ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಪ್ರಮುಖ ಸುದ್ದಿ :-   ಕೋಲಾರದಲ್ಲಿ ಕಾಂಗ್ರೆಸ್‌ ಬಣಗಳ ತಿಕ್ಕಾಟ ತಾರಕಕ್ಕೆ : ಐವರು ಶಾಸಕರಿಂದ ರಾಜೀನಾಮೆ ಬೆದರಿಕೆ; ರಾಜೀನಾಮೆ ಪತ್ರ ತೋರಿಸಿ ಎಂಎಲ್‌ ಸಿಗಳಿಂದ ಹೈಡ್ರಾಮಾ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement