ಸಾರಿಗೆ ಮುಷ್ಕರ ನಾಲ್ಕು ದಿನಗಳಲ್ಲಿ ಸಹಜ ಸ್ಥಿತಿಗೆ, ಹೀಗಾಗಿ ಎಸ್ಮಾ ಜಾರಿಯಿಲ್ಲ: ಸವದಿ

ಬೀದರ್‌: ‘ರಾಜ್ಯದಲ್ಲಿ ನಾಲ್ಕು ದಿನಗಳಲ್ಲಿ ಸಾರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬರಲಿದೆ. ಹೀಗಾಗಿ ಎಸ್ಮಾ ಜಾರಿ ಪ್ರಶ್ನೆಯೇ ಉದ್ಘವಿಸುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಷ್ಕರದ ಸಮಯದಲ್ಲಿ ರಾಜ್ಯದಲ್ಲಿ ‘ಶುಕ್ರವಾರ 900 ಬಸ್‌, ಶನಿವಾರ 1500 ಸಂಚರಿಸಿವೆ. ಭಾನುವಾರ 2 ಸಾವಿರ ಬಸ್‌ಗಳು ಓಡಾಡಲಿವೆ. ಸೋಮವಾರದ ವೇಳೆ ನೌಕರರು ಕರ್ತವ್ಯದ ಮೇಲೆ ಹಾಜರಾಗುವ ವಿಶ್ವಾಸ ಇದೆ’ ಎಂದು ತಿಳಿಸಿದರು.
ಕೆಲ ಚಾಲಕರು, ನಿರ್ವಾಹಕರು ಕರ್ತವ್ಯದ ಮೇಲೆ ಹಾಜರಾಗಲು ಸಿದ್ಧರಿದ್ದೇವೆ ಎಂದು ಕರೆಗಳನ್ನು ಮಾಡುತ್ತಿದ್ದಾರೆ. ನೌಕರರ ಸಂಘದ ಸದಸ್ಯರು ಬೆದರಿಕೆ ಹಾಕುತ್ತಿರುವ ಕಾರಣ ನೌಕರರು ಕೆಲಸಕ್ಕೆ ಹಾಜರಾಗಲು ಹಿಂಜರಿಯುತ್ತಿದ್ದಾರೆ. ನಾಲ್ಕು ದಿನಗಳ ಮುಷ್ಕರದಿಂದಾಗಿ ಈ ತಿಂಗಳು ಸಂಬಳ ಕೊಡಲು ಸಹ ನಿಗಮದ ಬಳಿ ಹಣ ಇಲ್ಲ. ಮತ್ತೆ ಸರ್ಕಾರ ನೆರವಿಗೆ ಬರಬೇಕಾಗಲಿದೆ’ ಎಂದು ಹೇಳಿದರು.
ಸಾರಿಗೆ ಮುಷ್ಕರದಿಂದ ಬಡವರು, ಮಧ್ಯಮ ವರ್ಗದವರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಯಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೂ ಸಮಸ್ಯೆ ಆಗುತ್ತಿದೆ. ಜನಸಾಮಾನ್ಯರ ಕಷ್ಟ ಅರಿತು ಸಾರಿಗೆ ನೌಕರರು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮನವಿ ಮಾಡಿದರು.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement