ಸಿಎಂ ಬಿಎಸ್‌ವೈ ಕುಳಿತ ಹಡಗು ಮುಳುಗುತ್ತಿದೆ, ಯತ್ನಾಳ ಇದಕ್ಕೆ ಸಾಕ್ಷಿ: ಸಿದ್ದರಾಮಯ್ಯ ಲೇವಡಿ

ಬೆಳಗಾವಿ: ಮುಖ್ಯಮಂತ್ರಿ ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಇದಕ್ಕೆ ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರಕ್ಕೆ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಯತ್ನಾಳ್ ಅವರೇ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಒಬ್ಬ ಬಿಜೆಪಿ ಹಿರಿಯ ಮುಖಂಡ. ಅವರು ಏನು ಹೇಳುತ್ತಿದ್ದಾರೆ ಎಂದು ಮಾಧ್ಯಮಗಳಿಗೇ ಪ್ರಶ್ನಿಸಿದ ಸಿದ್ದರಾಮಯ್ಯ, ಯತ್ನಾಳ್ ಅವರ ಮಾತು ಕೇಳಿದರೆ ಯಡಿಯೂರಪ್ಪ ಕುಳಿತಿರುವ ಹಡಗು ಮುಳುಗುತ್ತಿದೆ ಅಂತಾ ಅನಿಸುವುದಿಲ್ಲವೇ ಎಂದು ಪ್ರಶ್ನಿಸಿದರು.
ಸತೀಶ್ ಜಾರಕಿಹೊಳಿ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂಬ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಮಂಗಳ ಅಂಗಡಿಗೆ ಏನು ಮಾಡಿದರು ಎಂದು ಸಿದ್ದರಾಮಯ್ಯ ಮರು ಪ್ರಶ್ನೆ ಮಾಡಿದರು. ಸಿ.ಟಿ.ರವಿ ಅವರಿಗೆಲ್ಲ ನಾವು ಉತ್ತರ ಕೊಡಬೇಕಾಗಿಲ್ಲ. ಸಿಟಿ ರವಿ ಯಾವಾಗಲೂ ಸುಳ್ಳೇ ಹೇಳುತ್ತಾರೆ ಎಂದರು.

ಪ್ರಮುಖ ಸುದ್ದಿ :-   ಆರೋಗ್ಯದಲ್ಲಿ ಏರುಪೇರು : ಸಚಿವ ಜಮೀರ್‌ ಅಹ್ಮದ್‌ ಆಸ್ಪತ್ರೆಗೆ ದಾಖಲು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement