ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ

ಕುಂದಾಪುರ/ಹುಬ್ಬಳ್ಳಿ/ವಿಜಯಪುರ: ಕುಂದಾಪುರ ತಾಲೂಕಿನ ಹಲವಡೆ ಭಾನುವಾರ ಸಂಜೆ ಗಾಳಿ ಮಳೆಯಾಗಿದೆ. ಕೆಲವೆಡೆ ತೋಟದಲ್ಲಿ ಅಡಿಕೆ ಮರಗಳು, ಬಾಳೆ ಗಿಡಗಳು ಉರುಳಿಬಿದ್ದು ಅಪಾರ ಹಾನಿ ಸಂಭವಿಸಿದೆ.ಹಲವೆಡೆ ಆಲಿಕಲ್ಲುಗಳೂ ಬಿದ್ದಿವೆ.
ಸಿದ್ದಾಪುರ, ಹೊಸಂಗಡಿ, ಹಳ್ಳಿಹೊಳೆ, ಅಜ್ರಿ, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಉಳ್ಳೂರು ಮೊದಲಾದೆಡೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ.ಗೋಳಿಯಂಗಡಿ ಪೇಟೆಯಲ್ಲಿ ಧಾರಾಕಾರ ಮಳೆ ಸುರಿದು ವಾರದ ಸಂತೆಗೆ ತೊಂದರೆಯಾಗಿತ್ತು. ಮಾರಾಟಕ್ಕೆ ಇಟ್ಟ ವಸ್ತುಗಳು ಹಾಗೂ ದಿನನಿತ್ಯದ ಬಳಕೆ ಸಹಿತ ಇತರ ವಸ್ತುಗಳು ಮಳೆ ನೀರಿಗೆ ಒದ್ದೆಯಾಗಿವೆ.
ಹುಬ್ಬಳ್ಳಿ ಹಾಗೂ ಸುತ್ತಮುತ್ತ ಗುಡುಗು ಸಹಿತ ಮಳೆಯಾಗಿದೆ. ಸುಮಾರು ಒಂದು ತಾಸಿನ ಅಂತರದಲ್ಲಿ ಎರಡು ಸಲ ಸುಮಾರು ಅರ್ಧ ತಾಸಿನಂತೆ ಸಾಧಾರಣ ಮಳೆಯಾಗಿದೆ. ಆದರೆ ಗಾಳಿ ಜೋರಾಗಿತ್ತು.
ವಿಜಯಪುರ ಜಿಲ್ಲೆಯ ತಿಕೋಟಾ ಸಮೀಪದ ಘೋಣಸಗಿ ಗ್ರಾಮದಲ್ಲಿ ಭಾನುವಾರ ಸಂಜೆ ಆಲಿಕಲ್ಲು ಮಳೆಯಾಗಿದೆ. ಉಳಿದಂತೆ ವಿಜಯಪುರ ನಗರ ಸೇರಿದಂತೆ ಕೆಲವೆಡೆ ಗುಡುಗು, ಸಿಡಿಲು, ಗಾಳಿಯೊಂದಿಗೆ ಸಾಧಾರಣ ಮಳೆಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement