ಧಾರವಾಡ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರಿದ್ದ ಕಾರು ಬೈಕ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ಸೋಮವಾರ ನಡೆದ ವರದಿಯಾಗಿದೆ.
ಬೆಳಗಾವಿ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಬರುತ್ತಿದ್ದ ಕಾರು ಬೆಳಗಾವಿ ರಸ್ತೆಯ ಕೆವಿಜಿ ಬ್ಯಾಂಕ್ ಎದುರು ನಿಂತಿದ್ದ ಬೈಕ್ಗಳಿಗೆ ಕಾರು ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಮೂರು ಬೈಕ್ಗಳಿಗೆ ವಿಜಯ್ ಕುಲಕರ್ಣಿ ಅವರಿದ್ದ ಕಾರು ಡಿಕ್ಕಿಹೊಡೆದಿದೆ. ಡಿಕ್ಕೆ ಹೊಡೆದ ವೇಗಕ್ಕೆ ಚರಣ್ ಮೌನೇಶ್ವರ ನಾಯಕ (16) ಹಾಗೂ ಶೇಖರ ಬಸಪ್ಪ ಹುದ್ದಾರ (37) ಎಂಬುವವರು ಮೃತಪಟ್ಟಿದ್ದಾರೆ. ಅರವಿಂದ ಮಲ್ಲನಗೌಡ ಪಾಟೀಲ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ