ರಸ್ತೆ ಬದಿ ನಿಂತಿದ್ದ ಬೈಕ್‌ಗಳಿಗೆ ಕಾಂಗ್ರೆಸ್‌ ಮುಖಂಡನ ಕಾರು ಡಿಕ್ಕಿ: ಇಬ್ಬರ ಸಾವು

ಧಾರವಾಡ: ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಚಿವ ವಿನಯ್​ ಕುಲಕರ್ಣಿ ಅವರ ಸಹೋದರ ವಿಜಯ್​ ಕುಲಕರ್ಣಿ ಅವರಿದ್ದ ಕಾರು ಬೈಕ್​ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ಸೋಮವಾರ ನಡೆದ ವರದಿಯಾಗಿದೆ.
ಬೆಳಗಾವಿ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಬರುತ್ತಿದ್ದ ಕಾರು ಬೆಳಗಾವಿ ರಸ್ತೆಯ ಕೆವಿಜಿ ಬ್ಯಾಂಕ್ ಎದುರು ನಿಂತಿದ್ದ ಬೈಕ್​ಗಳಿಗೆ ಕಾರು ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಮೂರು ಬೈಕ್​ಗಳಿಗೆ ವಿಜಯ್​ ಕುಲಕರ್ಣಿ ಅವರಿದ್ದ ಕಾರು ಡಿಕ್ಕಿಹೊಡೆದಿದೆ. ಡಿಕ್ಕೆ ಹೊಡೆದ ವೇಗಕ್ಕೆ  ಚರಣ್ ಮೌನೇಶ್ವರ ನಾಯಕ (16) ಹಾಗೂ  ಶೇಖರ ಬಸಪ್ಪ ಹುದ್ದಾರ (37) ಎಂಬುವವರು ಮೃತಪಟ್ಟಿದ್ದಾರೆ. ಅರವಿಂದ ಮಲ್ಲನಗೌಡ ಪಾಟೀಲ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement