ಕರ್ನಾಟಕದಲ್ಲಿ ಸತತ ಎರಡನೇ ದಿನವೂ ದೈನಂದಿನ ಸೋಂಕು ಇಳಿಮುಖ..ಆದರೆ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣ ಮುಂದುವರೆದಿದ್ದು, ಮಂಗಳವಾರ 8778 ಹೊಸ ಪ್ರಕರಣಗಳು ದಾಖಲಾಗಿವೆ. ಕಳೆದ 24 ತಾಸಿನಲ್ಲಿ ಕೊರೊನಾ ಸೋಂಕಿನಿಂದ 67 ಜನರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಈವರೆಗೆ ಸೋಂಕಿಗೆ ತುತ್ತಾದವರ ಸಂಖ್ಯೆ 10,83,647 ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 13,008 ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ 6079 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವ್ರ ಸಂಖ್ಯೆ 9,92,003 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈಗ ರಾಜ್ಯದಲ್ಲಿ 78,617 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 474 ಮಂದಿ ತೀವ್ರ ನಿಗಾ ಘಟಕಗಳಲ್ಲಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ 5500 ಪ್ರಕರಣ ದಾಖಲಾಗಿದ್ದು, 55 ಜನರು ಮೃತಪಟ್ಟಿದ್ದಾರೆ. 4415 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಸದ್ಯ 57575 ಸಕ್ರಿಯ ಪ್ರಕರಣಗಳಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement