ಸೆಲ್ಫಿ ತೆಗೆಯಲು ಹೋಗಿ ನದಿಗೆ ಬಿದ್ದ ಪ್ರೇಮಿಗಳ ಮೃತದೇಹಗಳು ಪತ್ತೆ

ಜೊಯಿಡಾ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಗಣೇಶಗುಡಿ ಸೇತುವೆಯ ಮೇಲೆ ಸೋಮವಾರ ಮೊಬೈಲ್ ಫೋನ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಕಾಳಿ ನದಿಗೆ ಬಿದ್ದಿದ್ದರು ಎಂದು ಹೇಳಲಾದ ಪ್ರೇಮಿಗಳ ಮೃತದೇಹಗಳು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.
ಸೋಮವಾರ ಸಂಜೆಯಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ.
ಕೊನೆಗೆ ಮಂಗಳವಾರ ಬೆಳಿಗ್ಗೆ ಗಣೇಶಗುಡಿಯ ಫ್ಲೈ ಕ್ಯಾಚರ್ ರೆಸಾರ್ಟ್ ಸಿಬ್ಬಂದಿ ಸಹಕಾರದಿಂದ ಇಬ್ಬರ ಮೃತದೇಹಗಳು ಪತ್ತೆಯಾಯಿತು.
ಮೃತಪಟ್ಟ ಯುವಕ ಬೀದರಿನ ಪರುಷೋತ್ತಮ ಪಾಟೀಲ ಎಂದು ಗುರುತಿಸಲಾಗಿದ್ದು, ಬೀದರಿನ ಕರ್ನಾಟಕ ಕಾಲೇಜಿನಲ್ಲಿ ಡಗ್ರಿ ಓದುತ್ತಿದ್ದ ಎಂದು ಹೇಳಲಾಗಿದೆ. ಯುವತಿಯೂ ಬೀದರಿನ ರಕ್ಷಿತಾ ಎಂದು ಗುರುತಿಸಲಾಗಿದ್ದು ಈಕೆ ಎಂಜಿನಿಯರಿಂಗ್‌ ಪದವಿ ಓದುತ್ತಿದ್ದಳು ಎಂದು ಹೇಳಲಾಗಿದೆ.
ಇವರು ಸೆಲ್ಫಿ ತೆಗೆದುಕೊಳ್ಳುವಾಗ ಬಿದ್ದಿದ್ದಾರೆ ಎಂದು ಹೇಳಲಾಗಿದ್ದರೂ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ನಂತರವೇ ಗೊತ್ತಾಗಲಿದೆ. ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement