ಯುವಕನ ಭೀಕರ ಹತ್ಯೆ; ರುಂಡ, ಮುಂಡ ಪ್ರತ್ಯೇಕ ಸ್ಥಳಗಳಲ್ಲಿ ಪತ್ತೆ

ಹುಬ್ಬಳ್ಳಿ: ಅವಳಿ ನಗರದಲ್ಲಿ ಯುವಕನ ಭೀಕರ ಕೊಲೆಯಾಗಿದ್ದು,ಯುವಕನ ರುಂಡ ಹಾಗೂ ಮುಂಡ ಪ್ರತ್ಯೇಕ ಸ್ಥಳಗಳಲ್ಲಿ ಪತ್ತೆಯಾಗಿದೆ…!
ಹುಬ್ಬಳ್ಳಿ ನಗರದ ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ಮುಂಡ ಪತ್ತೆಯಾದರೆ ತಾಲೂಕಿನ ದೇವರಗುಡಿಹಾಳ ಅರಣ್ಯ ಪ್ರದೇಶದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ರುಂಡ ಪತ್ತೆಯಾಗಿದೆ, ಮಧ್ಯಾಹ್ನ ಹೊತ್ತಿಗೆ ರುಂಡ ಪತ್ತೆಯಾದ ನಂತರ ಸುಮಾರು ಆರೇಳು ತಾಸಿನ ನಂತರ ರಾತ್ರಿ ವೇಳೆ ಮುಂಡ ಪತ್ತೆಯಾಗಿದೆ.
ಯುವಕನ ರುಂಡ ನೋಡಿದ ಗ್ರಾಮಸ್ಥರು ಬೆಚ್ಚಿಬಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲೆ ಮಾಡಿ ಬಿಸಾಡಿ ಹೋಗಿರಬಹುದು ಎಂದು ಪೊಲೀಸರು ಶಂಕೆ ಪಡಿಸಿದ್ದು, ಕೇಶ್ವಾಪುರ ಮತ್ತು ಹುಬ್ಬಳ್ಳಿ ಗ್ರಾಮೀಣ ಪೊಲೀಸ ತನಿಖೆ ನಡೆಸಿದ್ದಾರೆ.

4 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ನಿಮ್ಮ ಕಾಮೆಂಟ್ ಬರೆಯಿರಿ

advertisement