ರಾಜ್ಯದಲ್ಲಿ ಲಾಕ್‌ಡೌನ್‌ ಅವಶ್ಯಕತೆಯಿಲ್ಲ: ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚುತ್ತಿದ್ದರೂ ಕರ್ನಾಟಕದಲ್ಲಿ ಲಾಕ್‌ಡೌನ್ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ. ಎ. 17ರ ನಂತರ ರಾಜ್ಯದಲ್ಲಿ ಲಾಕ್‌ಡೌನ್‌ ಮಾಡುವ ಯಾವುದೇ ಸಾಧ್ಯತೆಗಳಿಲ್ಲ ಎಂದರು.
ರಾಜ್ಯದ ಜನರು ಸರಕಾರದ ನಿರ್ದೇಶನಗಳನ್ನು ಪಾಲನೆ ಮಾಡುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು. ಜನರು ಕೊರೊನಾ ಕುರಿತಂತೆ ಗಂಭೀರತೆ ವಹಿಸಬೇಕು ಎಂದು ಅವರು ಮನವಿ ಮಾಡಿದರು.
ಸಾರಿಗೆ ನೌಕರರ ಮುಷ್ಕರ 8ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಸರಕಾರ ಮಾತುಕತೆಗೆ ಸಿದ್ಧವಿದೆ. ಸಾರಿಗೆ ನೌಕರರು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು. ಇದು ಮುಷ್ಕರ ಮಾಡುವ ಸಮಯವಲ್ಲ. ಏನೇ ಸಮಸ್ಯೆ ಇದ್ದರೂ ಮಾತುಕತೆ ಮಾಡುವ ಮೂಲಕ ಬಗೆಹರಿಸಬೇಕು. ಮುಷ್ಕರದಿಂದಾಗಿ ರಾಜ್ಯದ ಜನತೆಗೆ ತೊಂದರೆಯಾಗುತ್ತಿದೆ. ನೌಕರರು ಇದನ್ನು ಅರಿಯಬೇಕು ಎಂದು ಹೇಳಿದರು.
ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಸೋಲಿನ ಭಯ ಇರುವ ಕಾರಣಕ್ಕೆ ಸಿಎಂ ಪದೇ ಪದೇ ಬೆಳಗಾವಿಗೆ ಆಗಮಿಸುತ್ತಿದ್ದಾರೆ ಎಂಬ ಸತೀಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಗಳು ಕೇವಲ ಎರಡೇ ಬಾರಿ ಬೆಳಗಾವಿಗೆ ಬಂದು ಪ್ರಚಾರ ಮಾಡಿದ್ದಾರೆ. ರಾಜ್ಯದಲ್ಲಿ ಮೂರು ಕಡೆಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಸತೀಶ ಜಾರಕಿಹೊಳಿ ಗೆಲುವಿನ ಭ್ರಮೆಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

ಪ್ರಮುಖ ಸುದ್ದಿ :-   ಗದಗ: ನಾಲ್ವರು ಅಮಾಯಕರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು, ತಂದೆ-ತಾಯಿ ಕೊಲೆಗೆ ಮಗನೇ ಸುಪಾರಿ ಕೊಟ್ಟಿದ್ದ...! 8 ಮಂದಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement