ಶುಕ್ರವಾರ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ನಿರೀಕ್ಷೆ:ಡಿಸಿಎಂ ಸವದಿ

ಬೀದರ್: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಿಂದ ಸರ್ಕಾರ 170 ಕೋಟಿ ರೂ. ವರೆಗೆ ನಷ್ಟ ಅನುಭವಿಸುತ್ತಿದೆ ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಗುರುವಾರ ಇಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಕೆಲಸಕ್ಕೆ ಮರಳುವಂತೆ ನೌಕರರಿಗೆ ಸರ್ಕಾರ ಮತ್ತೊಮ್ಮೆ ಮನವಿ ಮಾಡುತ್ತಿದೆ. ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರ ಕಠಿಣ ಆರ್ಥಿಕ ಸ್ಥಿತಿ ಎದುರಿಸುತ್ತಿದೆ. ಗುರುವಾರ ಬೆಳಗ್ಗೆ ಹೆಚ್ಚಿನ ನೌಕರರು ಕೆಲಸಕ್ಕೆ ಮರಳಿದ್ದಾರೆ. ಗುರುವಾರ ಬೆಳಗ್ಗೆಯಿಂದ 2,500 ಬಸ್ ಗಳು ಸಂಚರಿಸುತ್ತಿವೆ. ಕರ್ತವ್ಯಕ್ಕೆ ಹಾಜರಾಗಲು ಹೆಚ್ಚಿನ ಸಂಖ್ಯೆಯ ನೌಕರರು ಮುಂದೆ ಬರುತ್ತಿದ್ದು, ಶುಕ್ರವಾರ ಬೆಳಗ್ಗೆಯಿಂದ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಮುಷ್ಕರದ ವೇಳೆ ಕಲ್ಲು ತೂರಾಟ ಮತ್ತು ಇತರ ಘಟನೆಗಳಿಂದಾಗಿ 59ಕ್ಕೂ ಹೆಚ್ಚು ಬಸ್ ಗಳು ಹಾನಿಗೀಡಾಗಿವೆ. ಇಂತಹ ಘಟನೆಗಳನ್ನು ಸರ್ಕಾರ ಸಹಿಸುವುದಿಲ್ಲ. ಸರ್ಕಾರ ಕಾನೂನಿನಂತೆ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ಎಚ್ಚರಿಸಿದರು.
ನೌಕರರು ಮುಷ್ಕರ ಮುಂದುವರಿಸಿದರೆ, ಹೆಚ್ಚಿನ ಖಾಸಗಿ ಬಸ್ ಗಳನ್ನು ಪರ್ಯಾಯವಾಗಿ ಬಳಸಿಕೊಳ್ಳಲಾಗುವುದು. ಗುರುವಾರದ ವರೆಗೆ 24,000 ಖಾಸಗಿ ಬಸ್ ಗಳನ್ನು ಸಾರ್ವಜನಿಕ ಸೇವೆಗಳಿಗೆ ಬಳಸಿಕೊಳ್ಳಲಾಗಿದೆ.
ಕೊರೊನಾದಿಂದಾಗಿ ಈಗಾಗಲೇ ಭಾದಿತವಾಗಿರುವ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಬೆಳವಣಿಗೆಯ ಮೇಲೆ ಇಂತಹ ಮುಷ್ಕರಗಳು ಇನ್ನಷ್ಟು ಪ್ರತಿಕೂಲ ಪರಿಣಾಮ ಬೀರುತ್ತವೆ ಎಂಬುದನ್ನು ನೌಕರರು ಅರಿತುಕೊಳ್ಳಬೇಕು. ಸಾಂಕ್ರಾಮಿಕ ಸಮಯದಲ್ಲಿ ಸಹ ಸಂಬಳ ಮತ್ತು ಇತರ ಸವಲತ್ತುಗಳನ್ನು ಸರ್ಕಾರ ಒದಗಿಸಿದೆ ಎಂಬುದನ್ನು ನೌಕರರು ಮರೆಯಬಾರದು ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮಂಗಳೂರಲ್ಲಿ ಅಭೂತಪೂರ್ವ ರೋಡ್ ಶೋ : ಕರಾವಳಿ ಜನರ ಬಗ್ಗೆ ಪ್ರಧಾನಿ ಮೋದಿ ಟ್ವೀಟ್‌

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement