ಶಾಸಕ ರಮೇಶ ಜಾರಕಿಹೊಳಿಗೆ ಎಸ್‌ಐಟಿ ನೊಟೀಸ್‌

ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಎಪ್ರಿಲ್‌ ೨೦ರಂದು ಸಂಜೆ ೪:೦೦ ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ರಮೇಶ ಜಾರಕಿಹೊಳಿ ಅವರಿಗೆ ನೊಟೀಸ್‌ ನೀಡಿದ್ದಾರೆ.
ಎಸ್‌ಐಟಿಯ ಇಬ್ಬರು ಅಧಿಕಾರಿಗಳು ಶುಕ್ರವಾರ ಬೆಳಗಾವಿಗೆ ಭೇಟಿ ನೀಡಿ ಖುದ್ದಾಗಿ ನೊಟೀಸ್‌ ನೀಡಲು ಬಂದಿದ್ದರು. ಆದರೆ ಅಧಿಕಾರಿಗಳಿಗೆ ಶಾಸಕರು ಲಭ್ಯವಾಗಲಿಲ್ಲ. ನಂತರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಚೇರಿಗೆ ನೊಟೀಸ್‌ ತಲುಪಿಸಿದ್ದಾರೆ.
ಎಸ್‌ಐಟಿಯ ಇಬ್ಬರು ಅಧಿಕಾರಿಗಳು ಎಪ್ರಿಲ್‌ ೬ರಂದು ಗೋಕಾಕ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ರಮೇಶ ಜಾರಕಿಹೊಳಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಶಾಸಕರು ಆಸ್ಪತ್ರೆಯಿಂದ ಬಿಡುಗಡೆಯಾಗುವ ಮುನ್ನವೇ ಮಾಹಿತಿ ನೀಡಬೇಕು ಎಂದು ವೈದ್ಯಾಧಿಕಾರಿಗೆ ಸೂಚಿಸಿದ್ದರು. ಶಾಸಕ ರಮೇಶ ಜಾರಕಿಹೊಳಿ ಎಪ್ರಿಲ್‌ ೭ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement