ಉಡುಪಿಯ ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ

ಉಡುಪಿ; ಉಡುಪಿಯ ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ ಮಾಡಲಾಗಿದ್ದು, ಮೇ 11 ರಿಂದ 14ರ ವರೆಗೆ ಪಟ್ಟಾಭಿಷೇಕ ವಿಧಿವಿಧಾನಗಳು ನಡೆಯಲಿವೆ.
ಬುಧವಾರ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು 16 ವರ್ಷದ ವಟು ಅನಿರುದ್ಧ್ ಸರಳತ್ತಾಯ ಅವರನ್ನು ಶಿರೂರು ಮಠಕ್ಕೆ ನೂತನ ಪೀಠಾಧಿಕಾರಿಯಾಗಿ ಘೋಷಣೆ ಮಾಡಿದ್ದಾರೆ. ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ವಟು ಅನಿರುದ್ಧ ಸರಳತ್ತಾಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ನಿಡ್ಲೆ ಮೂಲದವರು. ಮೇ 11ರಿಂದ 14ರ ವರೆಗೆ ಪಟ್ಟಾಭಿಷೇಕ ವಿಧಿ-ವಿಧಾನಗಳು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಮಠದಲ್ಲಿ ನಡೆಯಲಿದೆ. ಅಷ್ಟಮಠಗಳಲ್ಲಿ ಬಾಲಸನ್ಯಾಸ ಸ್ವೀಕಾರ ಸಂಪ್ರದಾಯ ಇದೆ. ಸಂಪ್ರದಾಯದ ಪ್ರಕಾರವೇ ವಟುವಿನ ಆಯ್ಕೆ ನಡೆದಿದೆ ಎಂದು ತಿಳಿಸಲಾಗಿದೆ.
ಅಷ್ಟಮಠಗಳ ಯತಿಗಳಿಂದ ಸನ್ಯಾಸ ವಿಚಾರದಲ್ಲಿ ಯಾವುದೇ ಸಂವಿಧಾನ ರಚನೆಯಾಗಿಲ್ಲ. ಎಲ್ಲಾ ಯತಿಗಳ ಗಮನಕ್ಕೆ ತಂದು ಶಿಷ್ಯನ ಆಯ್ಕೆ ಮಾಡಿದ್ದೇವೆ” ಎಂದು ಸೋದೆ ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಜುಲೈ 19, 2018ರಂದು ಸಂಶಯಾಸ್ಪದ ರೀತಿಯಲ್ಲಿ ಲಕ್ಷ್ಮೀವರತೀರ್ಥ ಸ್ವಾಮೀಜಿ ನಿಧನ ಹೊಂದಿದ್ದರು. ಬಳಿಕ ಸೋದೆ ಮಠ ಉಡುಪಿಯ ಶಿರೂರು ಮಠ ಮಠದ ವ್ಯವಹಾರ, ಆಸ್ತಿಪಾಸ್ತಿ, ತೆರಿಗೆ ನಿರ್ವಹಣೆ ನೋಡಿಕೊಳ್ಳುತ್ತಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

4.8 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement