ಬೆಳಗಾವಿ; ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಪ್ರಕಟಣೆ ನೀಡಿರುವ ಶ್ರೀಮಠದ ವ್ಯವಸ್ಥಾಪಕರು, ಚಿಕ್ಕೋಡಿ ತಾಲೂಕಿನ ಶ್ರೀಕ್ಷೇತ್ರ ಯಡೂರಿನಲ್ಲಿ ಹೋಂ ಐಸೋಲೇಷನ್ ಮೂಲಕ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಭಕ್ತರು ಯಾವುದೇ ಆತಂಕಕ್ಕೆ ಒಗಾಗಬಾರದು ಎಂದು ತಿಳಿಸಿದ್ದಾರೆ.
ಶ್ರೀಶೈಲ ಕ್ಷೇತ್ರದಲ್ಲಿ ನಡೆದ ಯುಗಾದಿ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಶ್ರೀಗಳ ಸೇವಾ ಸಿಬ್ಬಂದಿಗೂಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಇತ್ತೀಚೆಗೆ ಶ್ರೀಗಳು ಮತ್ತು ಶ್ರೀಗಳ ಸೇವಾ ಸಿಬ್ಬಂದಿ ಸಂಪರ್ಕಕ್ಕೆ ಬಂದವರೆಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಶ್ರೀಶೈಲ ಜಗದ್ಗುರುಗಳು ತಿಳಿಸಿದ್ದಾರೆ
ನಿಮ್ಮ ಕಾಮೆಂಟ್ ಬರೆಯಿರಿ