ಬೆಂಗಳೂರು: ಕೊರೋನಾ ಎರಡನೇ ಅಲೆ ತಜ್ಞರು ಅಂದಾಜಿಸಿದ್ದಕ್ಕಿಂತ ಭೀಕರವಾಗಿದೆ. ಸೋಂಕಿನ ಹರಡುವಿಕೆ ಅಂದಾಜಿಗೆ ಸಿಗುತ್ತಿಲ್ಲ.
ಈ ಕೋವಿಡ್ ಸಮಯದಲ್ಲಿ ಕೊರೊನಾ ವಾರಿಯರ್ಸ್ ಆಗಿದ್ದ ಬೆಂಗಳೂರಿನ ಸ್ವಾಬ್ ಸಂಗ್ರಹಕಾರರೊಬ್ಬರು ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಮೃತಪಟ್ಟಿದ್ದಾರೆ.
. ಮರ್ಸಿಟೌನ್ನ ಗೀತಾ (35) ಎಂಬವರು ಮೃತಪಟ್ಟವರು. ಕೊರೊನಅ ಸೋಂಕಿಗೆ ಒಳಗಾಗಿದ್ದ ಅವರು, ನಾಲ್ಕೈದು ಆಸ್ಪತ್ರೆಗಳಿಗೆ ಓಡಾಡಿದರೂ ಸೂಕ್ತ ಸಮಯದಲ್ಲಿ ಬೆಡ್ ಸಿಗದ ಕಾರಣ ಆಕ್ಸಿಜನ್ ಮಟ್ಟ ಕಡಿಮೆಯಾಗಿ ಪ್ರಾಣ ಬಿಟ್ಟಿದ್ದಾರೆ.
ಒಂದು ವಾರದ ಹಿಂದೆ ಗೀತಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಉಸಿರಾಟದ ತೊಂದರೆಯಿದ್ದ ಅವರಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದಾಗ ಸೂಕ್ತ ಸಮಸಯದಲ್ಲಿ ಬೆಡ್ ಸಿಕ್ಕಿರಲಿಲ್ಲ. ಕಡೆಗೆ ನಾಲ್ಕೈದು ತಾಸು ಕಾಯ್ದ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿತ್ತು. ಈ ವೇಳೆ ಅವರಿಗೆ ಆಕ್ಸಿಜನ್ ಪ್ರಮಾಣ ಕಡಿಮೆಯಾಗಿತ್ತು. ಕಡೆಗೂ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಪ್ರಾಣ ಬಿಟ್ಟಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ