ಕರ್ನಾಟಕದಲ್ಲಿ ಶನಿವಾರವೂ 40 ಸಾವಿರ ದಾಟಿದ ಏಕದಿನದ ಕೊರೊನಾ ಸೋಂಕು

ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಸತತ ಎರಡನೇ ದಿನವೂ 40 ಸಾವಿರದ ಗಡಿ ದಾಟಿದೆ.
ಕಳೆದ ಇಪ್ಪತ್ನಾಲ್ಕು 40,990 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿನಿಂದ 271 ಮಂದಿ ಸಾವಿಗೀಡಾಗಿದ್ದಾರೆ. ಇದೇ ಅವಧಿಯಲ್ಲಿ 18,341 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಶನಿವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 15,64,132ಕ್ಕೇ ಏರಿದೆ. ಈ ಪೈಕಿ ಈವರೆಗೂ 11,24,909 ಸೋಂಕಿತರು ಗುಣಮುಖರಾಗಿದ್ದು, 15,794 ಜನರು ಕೊರೊನಾ ಸೋಂಕಿತರಿಗೆ ಮೃತಪಟ್ಟಿದ್ದಾರೆ. 4,05,068 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.
ಕರ್ನಾಟಕದಲ್ಲಿ ಪತ್ತೆಯಾದ ಒಟ್ಟು ಹೊಸ ಪ್ರಕರಣಗಳ ಪೈಕಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಬೆಂಗಳೂರಿನಲ್ಲೇ ದೃಢಪಟ್ಟಿವೆ. ಒಂದು ದಿನದಲ್ಲಿ ಸಿಲಿಕಾನ್ ಸಿಟಿಯಲ್ಲೇ 19,353 ಮಂದಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮಹಾಮಾರಿಗೆ 162 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 6537ಕ್ಕೆ ಏರಿಕೆಯಾಗಿದೆ. 2,70,993 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ವಿವಿಧ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ:
ರಾಜ್ಯದಲ್ಲಿ ಒಟ್ಟು 40990 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 319, ಬಳ್ಳಾರಿ 1163, ಬೆಳಗಾವಿ 532, ಬೆಂಗಳೂರು ಗ್ರಾಮಾಂತರ 940, ಬೆಂಗಳೂರು 19353, ಬೀದರ್ 360, ಚಾಮರಾಜನಗರ 548, ಚಿಕ್ಕಬಳ್ಳಾಪುರ 820, ಚಿಕ್ಕಮಗಳೂರು 500, ಚಿತ್ರದುರ್ಗ 103, ದಕ್ಷಿಣ ಕನ್ನಡ 933, ದಾವಣಗೆರೆ 386, ಧಾರವಾಡ 540, ಗದಗ 205, ಹಾಸನ 790, ಹಾವೇರಿ 168, ಕಲಬುರಗಿ 1407, ಕೊಡಗು 590, ಕೋಲಾರ 440, ಕೊಪ್ಪಳ 1019, ಮಂಡ್ಯ 1235, ಮೈಸೂರು 2529, ರಾಯಚೂರು 601, ರಾಮನಗರ 577, ಶಿವಮೊಗ್ಗ 661, ತುಮಕೂರು 2308, ಉಡುಪಿ 670, ಉತ್ತರ ಕನ್ನಡ 687, ವಿಜಯಪುರ 340, ಯಾದಗಿರಿ 266 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

5 / 5. 3

ನಿಮ್ಮ ಕಾಮೆಂಟ್ ಬರೆಯಿರಿ

advertisement