ಬೆಂಗಳೂರು: ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಿಕ ಕೊರತೆಯಿಂದ 24 ರೋಗಿಗಳು ಮೃತಪಟ್ಟಿರುವ ಘಟನೆ ಬಗ್ಗೆ ಎಲ್ಲಿ ಲೋಪವಾಗಿದೆ ಎಂದು ಸೂಕ್ತ ತನಿಖೆ ನಡೆಸುತ್ತೇವೆ. ಈ ಬಗ್ಗೆ ತನಿಖೆಯಲ್ಲಿ ಸತ್ಯಸತ್ಯತೆ ಹೊರಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ನಿನ್ನೆ ಬೆಳಗ್ಗೆ 7 ಗಂಟೆಯಿಂದ ಮಧ್ಯರಾತ್ರಿ ವರೆಗೆ 14 ಜನರು ಮೃತಪಟ್ಟಿದ್ದು, ಇವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಧ್ಯರಾತ್ರಿ 12 ರಿಂದ ಬೆಳಗ್ಗೆ 3 ಗಂಟೆ ವರೆಗೆ ಮೂವರು ಮೃತಪಟ್ಟಿದ್ದು, ಮುಂಜಾನೆ 3 ರಿಂದ 7ರವರೆಗೆ 7 ಜನಮೃತಪಟ್ಟಿದ್ದಾರೆ, 24 ಗಂಟೆಯಲ್ಲಿ ಒಟ್ಟು 23 ಜನರು ಸಾವಿಗೀಡಾಗಿದ್ದಾರೆ ಎಂದು ತಿಳಿಸಿದರು.
ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಆಮ್ಲಜನಕದ ಕೊರತೆಯಿಂದ ಮೂವರು ಮಾತ್ರ ಮೃತಪಟ್ಟಿದ್ದಾರೆ. ಸಂಭವಿಸಿರುವ ಘಟನೆ ಬಹಳ ದುಃಖಕರವಾಗಿದ್ದು, ಮೃತರ ಕುಟುಂಬಗಳೊಂದಿಗೆ ರಾಜ್ಯ ಸರ್ಕಾರವಿದೆ. ಘಟನೆಯ ತನಿಖೆಗೆ ಈಗಾಗಲೇ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ