ಶಾಕಿಂಗ್‌..ಸಹೋದ್ಯೋಗಿಗಳ ಹೊಡೆದಾಟದಲ್ಲಿ ಕುಸ್ತಿಪಟು ಸಾವು: ಸ್ಕ್ಯಾನರ್ ಅಡಿಯಲ್ಲಿ ಒಲಿಂಪಿಕ್‌ ಕುಸ್ತಿಪಟು ಸುಶೀಲ್ ಕುಮಾರ್ ಪಾತ್ರ

ನವ ದೆಹಲಿ: ದೆಹಲಿ ಕ್ರೀಡಾಂಗಣದೊಳಗಿನ ಕುಸ್ತಿಪಟುಗಳ ಗುಂಪಿನ ನಡುವೆ ಜಗಳ ಬಯಲಾಗಿದ್ದು, ಒಬ್ಬ ಕುಸ್ತಿಪಟು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದು, ಸದ್ಯ ಈ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ
ಉತ್ತರ ದೆಹಲಿಯ ಛತ್ರಸಾಲ ಕ್ರೀಡಾಂಗಣ ಸಂಕೀರ್ಣದೊಳಗೆ ಕುಸ್ತಿಪಟು ಸಾವಿಗೆ ಕಾರಣವಾದ ಜಗಳಕ್ಕೆ ಸಂಬಂಧಿಸಿದಂತೆ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರನ್ನು ಎಫ್ಐಆರ್‌ನಲ್ಲಿ ಹೆಸರಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ನಗರದ ಉತ್ತರ ಭಾಗದ ಛತ್ರಸಾಲ ಕ್ರೀಡಾಂಗಣದೊಳಗೆ 23 ವರ್ಷದ ಕುಸ್ತಿಪಟು ಮೃತಪಟ್ಟಿದ್ದಾನೆ ಹಾಗೂ ಆತನ ಇಬ್ಬರು ಸ್ನೇಹಿತರು ಗಾಯಗೊಂಡಿದ್ದಾರೆ, ಇತರ ಕುಸ್ತಿಪಟುಗಳು ಕ್ರೂರವಾಗಿ ಹಲ್ಲೆ ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.
ಪಾರ್ಕಿಂಗ್ ಪ್ರದೇಶದಲ್ಲಿ ಕುಮಾರ್, ಅಜಯ್, ಪ್ರಿನ್ಸ್, ಸೋನು, ಸಾಗರ್, ಅಮಿತ್ ಮತ್ತು ಇತರರ ನಡುವೆ ಜಗಳ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಾದ ನಂತರ ಪೊಲೀಸರು ಈ ಸಂಬಂಧ ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪರಾಧದ ಸ್ಥಳ ಮತ್ತು ಎಲ್ಲ ಐದು ವಾಹನಗಳನ್ನು ಪರಿಶೀಲಿಸಲಾಯಿತು. ತಪಾಸಣೆಯ ಸಮಯದಲ್ಲಿ, ಒಂದು ಸ್ಕಾರ್ಪಿಯೋದಲ್ಲಿ ಐದು ಲೈವ್ ಕಾರ್ಟ್ರಿಜ್ಗಳೊಂದಿಗೆ ಒಂದು ಡಬಲ್ ಬ್ಯಾರೆಲ್ ಲೋಡ್ ಗನ್ ಕಂಡುಬಂದಿದೆ ಮತ್ತು ಎರಡು ಮರದ ತುಂಡುಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.
ಎಲ್ಲ ಐದು ವಾಹನಗಳು ಮತ್ತು ಅಪರಾಧದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಪರಾಧದ ಸ್ಥಳವನ್ನು ಎಫ್ಎಸ್ಎಲ್, ರೋಹಿಣಿಯ ವಿಧಿವಿಜ್ಞಾನ ತಜ್ಞರು ಪರಿಶೀಲಿಸಿದ್ದಾರೆ” ಎಂದು ಹೆಚ್ಚುವರಿ ಪೊಲೀಸ್ ಪೊಲೀಸ್ ಆಯುಕ್ತ (ವಾಯುವ್ಯ) ಗುರುಕ್ಬಾಲ್ ಸಿಂಗ್ ಸಿಧು ಹೇಳಿದರು.
ತನಿಖೆಯ ಸಮಯದಲ್ಲಿ, ಸಿವಿಲ್ ಲೈನ್ಸ್‌ನ ಟ್ರಾಮಾ ಸೆಂಟರ್‌ನಿಂದ ಸಾಗರ್ ಸಾವು ಮತ್ತು ಸೋನುಗೆ ಗಾಯದ ಬಗ್ಗೆ ಮಾಹಿತಿ ದೊರೆತಿದ್ದು, ಈ ನಂತರ ಐಪಿಸಿಯ 302, 365, 120 ಬಿ ಸೆಕ್ಷನ್‌ಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement