ಕರ್ನಾಟಕದಲ್ಲಿ ಅನೇಕ ದಿನಗಳ ನಂತರ ಭಾನುವಾರ ದೈನಂದಿನ ಸೋಂಕಿಗಿಂತ ಗುಣಮುಖರಾದವರೇ ಹೆಚ್ಚು..!

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ತಾಸಿನಲ್ಲಿ ( ಭಾನುವಾರ) 31,531 ಹೊಸ ಕೋವಿಡ್ ಪ್ರಕರಣ ದೃಢಪಟ್ಟಿದ್ದು, 403 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇದೇ ಸಮಯದಲ್ಲಿ 36,475 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅನೇಕ ದಿನಗಳ ನಂತರ ದೈನಂದಿನ ಸೋಂಕಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾದವರು ಹೆಚ್ಚಾಗಿದ್ದಾರೆ.
ರಾಜ್ಯಾದ್ಯಂತ ಒಟ್ಟು 6,00,147 ಸಕ್ರಿಯ ಪ್ರಕರಣಗಳಿವೆ. ಬೆಂಗಲೂರು ನಗರದಲ್ಲಿ ಮೊದಲ ಬಾರಿಗೆ ಹತ್ತು ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 8,344 ಪ್ರಕರಣಗಳು ದಾಖಲಾಗಿವೆ. 143 ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 13,612 ಮಂದಿ ಗುಣಮುಖರಾಗಿದ್ದು, ಒಟ್ಟು 3,61,380 ಸಕ್ರಿಯ ಪ್ರಕರಣಗಳಿವೆ.
403

ರಾಜ್ಯದಲ್ಲಿ ಜಿಲ್ಲಾವಾರು ಸೋಂಕಿತ ಪ್ರಕರಣಗಳು: ರಾಜ್ಯದಲ್ಲಿ ರವಿವಾರ 31,531 ಸೋಂಕಿತ ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 431, ಬಳ್ಳಾರಿ 1,729, ಬೆಳಗಾವಿ 1,762, ಬೆಂಗಳೂರು ಗ್ರಾಮಾಂತರ 1,082 ಬೆಂಗಳೂರು ನಗರ 8,344, ಬೀದರ್ 129, ಚಾಮರಾಜನಗರ 440, ಚಿಕ್ಕಬಳ್ಳಾಪುರ 558, ಚಿಕ್ಕಮಗಳೂರು 963, ಚಿತ್ರದುರ್ಗ 640, ದಕ್ಷಿಣ ಕನ್ನಡ 957, ದಾವಣಗೆರೆ 1,155, ಧಾರವಾಡ937, ಗದಗ 453, ಹಾಸನ 1182, ಹಾವೇರಿ 184, ಕಲಬುರಗಿ 645, ಕೊಡಗು 191, ಕೋಲಾರ 569, ಕೊಪ್ಪಳ 617, ಮಂಡ್ಯ 709, ಮೈಸೂರು 1811, ರಾಯಚೂರು 464, ರಾಮನಗರ 403, ಶಿವಮೊಗ್ಗ 643, ತುಮಕೂರು 2,138, ಉಡುಪಿ 745, ಉತ್ತರಕನ್ನಡ 1087, ವಿಜಯಪುರ 330, ಯಾದಗಿರಿಜಿಲ್ಲೆಯಲ್ಲಿ 233 ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲಾವಾರು ಸಂಪೂರ್ಣ ವಿವರಗಳನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಅಪಘಾತದಲ್ಲಿ ಮಗ ಸಾವು ; ಸುದ್ದಿ ಕೇಳಿ ಆಘಾತದಿಂದ ತಾಯಿಯೂ ಕುಸಿದುಬಿದ್ದು ಸಾವು

16-05-2021 HMB Kannada

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement