ನಿರ್ಭಯಾ ಪ್ರಕರಣ ನೆನಪಿಸಿದ ಘಟನೆ, ಸಾಮೂಹಿಕ ಅತ್ಯಾಚಾರ, ಮೃಗೀಯ ವರ್ತನೆ, ಅತ್ಯಾಚಾರ ಆರೋಪಿಗಳಿಗೆ ಗುಂಡೇಟು

ಬೆಂಗಳೂರು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಆರೋಪಿಗಳಾದ ರಿದಾಯ್ ಬಾಬು, ಸಾಗರ್‌ ಅವರ ಮೇಲೆ ಕಾಲಿಗೆ ಗುಂಡುಹಾರಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಬೆಳಗ್ಗೆ ಸ್ಥಳ ಮಹಜರಿಗೆ ಕೆ.ಚನ್ನಸಂದ್ರಕ್ಕೆ ಕರೆದೊಯ್ದಿದ್ದಾಗ ಈ ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶಾರಣಾಗುವಂತೆ ಸೂಚನೆ ನೀಡಿದ್ದಾರೆ. ಆದರೆ ಪೊಲೀಸರ ಮಾತು ಕೇಳದೆ ಹಲ್ಲೆಗೆ ಮುಂದಾಗಿದ್ದು ಈ ವೇಳೆ ಪೊಲೀಸರು ಆರೋಪಿಗಳಾದ ರಿದಾಯ್ ಬಾಬು ಹಾಗೂ ಸಾಗರ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದು ಅನಂತರ ಬಧಿಸಿದ್ದಾರೆ.
ಘಟನೆ ವಿವರ:
ರಾಜಧಾನಿ ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು. ನಡೆದಿತ್ತು. ಈ ಪ್ರಕರಣದಲ್ಲಿ ಭಾಗಿಯಾದವರೆಲ್ಲರೂ ಬಾಂಗ್ಲಾದೇಶದವರು. ಅವರು ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನ ರಾಮಮೂರ್ತಿ ನಗರದ ಎನ್‌ಆರ್‌ಐ ಕಾಲೋನಿಯಲ್ಲಿ ವಾಸವಾಗಿದ್ದರು. ಇವರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಆದರೆ ಕಳೆದ 10 ದಿನಗಳ ಹಿಂದೆ ಬಾಂಗ್ಲಾ ಮೂಲದ ಯುವತಿ ಮೇಲೆ ಈ ಯುವಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಇಬ್ಬರು ಯುವಕರು ಯುವತಿಯ ಕೈ ಗಟ್ಟಿಯಾಗಿ ಹಿಡಿದುಕೊಂಡು ಬಾಯನ್ನು ಅಮುಕಿ ಯುವತಿಯ ಮೇಲೆ ಅತ್ಯಾಚಾರ ಮಾಡಲಾಗಿದೆ.. ಅಷ್ಟೇ ಅಲ್ಲ, ಈ ದುರುಳರು ಅತ್ಯಾಚಾರ ಮಾಡಿದ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.
ಅಸ್ಸಾಂನಲ್ಲಿ ಇವರ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ:
ಈ ಪೈಶಾಚಿಕ ಕೃತ್ಯದ ವಿಡಿಯೋ ಭಾರತದ ಈಶಾನ್ಯ ರಾಜ್ಯಗಳು ಹಾಗೂ ಪಕ್ಕದ ಬಾಂಗ್ಲಾದೇಶದಲ್ಲಿ ದೊಡ್ಡಪ್ರಮಾಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಬಗ್ಗೆ ಮಾಹಿತಿ ತಿಳಿದ ಅಸ್ಸಾಂ ಪೊಲೀಸರು ವಿಡಿಯೋ ಮೂಲ ಹುಡುಕಲು ಮುಂದಾಗಿದ್ದಾರೆ. ಆಗ ಕೃತ್ಯದಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ತಕ್ಷಣವೇ ಅಸ್ಸಾಂ ಪೊಲೀಸರು ಈ ಬಗ್ಗೆ ಬಾಂಗ್ಲಾ ದೇಶದ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಜೊತೆಗೆ ಇಲ್ಲಿಯೂ ಅಸ್ಸಾಂ ಪೊಲೀಸರು ಈ ಕಾಮುಕರ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಪ್ರಕಟಿಸಿದ್ದರು. ಮಾಹಿತಿ ತಿಳಿದ ತಕ್ಷಣವೇ ಕಾರ್ಯಪ್ರವೃತ್ತರಾದ ಬಾಂಗ್ಲಾದೇಶದ ಪೊಲೀಸರು ಕುಟುಂಬದ ಸದಸ್ಯರನ್ನ ಪತ್ತೆ ಮಾಡಿ ಈ ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಗೊತ್ತಾದ ತಕ್ಷಣವೇ ರಾಮಮೂರ್ತಿ ನಗರ ಠಾಣಾ ಪೊಲೀಸರು, ಆವಲಹಳ್ಳಿಯಲ್ಲಿ ಅಡಗಿ ಕೂತಿದ್ದ ಓರ್ವ ಯುವತಿ ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರು ಪರಾರಿಯಾಗಿದ್ದು, ಅವರಿಗೂ ಬಲೆ ಬೀಸಿದ್ದಾರೆ.
ಪ್ರಕರಣದಲ್ಲಿ ಬಾಂಗ್ಲಾದೇಶದ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹೈದರಾಬಾದ್‌ನ ಹಕೀಲ್ ಎಂಬುವರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಸಹಕರಿಸಿದ್ದ ಮಹಿಳೆಯೊಬ್ಬಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತ ಆರೋಪಿಗಳು, ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಬಾಂಗ್ಲಾದೇಶದಿಂದ ಯುವತಿಯನ್ನು ನಗರಕ್ಕೆ ಕರೆಸಿ ಕೃತ್ಯ ಎಸಗಿದ್ದಾರೆ’ ಎಂದೂ ಮೂಲಗಳು ಹೇಳಿವೆ.
ಮೃಗೀಯ ವರ್ತನೆ: ಬಾಂಗ್ಲಾದೇಶದ ಯುವತಿ, ಸಂಬಂಧಿ ಹಾಗೂ ಪರಿಚಯಸ್ಥರ ಜೊತೆ ಭಾರತಕ್ಕೆ ಬಂದಿದ್ದರು. ಅವರನ್ನು ಬರಮಾಡಿಕೊಂಡಿದ್ದ ಆರೋಪಿಗಳು, ರಾಮಮೂರ್ತಿನಗರ ಠಾಣೆ ವ್ಯಾಪ್ತಿಯ ಕೊಠಡಿಯೊಂದರಲ್ಲಿ ಇರಿಸಿ ವೇಶ್ಯಾವಾಟಿಕೆಗೆ ಬಳಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ, ಯುವತಿ ಅದಕ್ಕೆ ಒಪ್ಪಿರಲಿಲ್ಲ’.ಹಾಗೂ ವಾಪಸು ಊರಿಗೆ ಕಳುಹಿಸುವಂತೆ ಪಟ್ಟು ಹಿಡಿದಿದ್ದರು. ಜೊತೆಯಲ್ಲೇ ಇದ್ದ ಇನ್ನೊಬ್ಬ ಮಹಿಳೆ, ವೇಶ್ಯಾವಾಟಿಕೆಗಾಗಿ ಪುನಃ ಒತ್ತಾಯಿಸಿದ್ದಳು. ಅದಕ್ಕೂ ಯುವತಿ ಒಪ್ಪಿರಲಿಲ್ಲ. ಜೊತೆಗೆ, ಹಣದ ವಿಚಾರಕ್ಕೂ ಅವರ ನಡುವೆ ವೈಮನಸ್ಸು ಉಂಟಾಗಿತ್ತು.’
ಇದರಿಂದ ಕೋಪಗೊಂಡ ಮಹಿಳೆ ಹಾಗೂ ಇತರೆ ಆರೋಪಿಗಳು, ಯುವತಿಯನ್ನು ಎಳೆದಾಡಿದ್ದರು. ನಗ್ನಗೊಳಿಸಿದ್ದರು. ಗುಪ್ತಾಂಗಕ್ಕೆ ಮದ್ಯದ ಬಾಟಲಿ ಹಾಕಿ ಮೃಗೀಯವಾಗಿ ವರ್ತಿಸಿ ಅತ್ಯಾಚಾರ ಎಸಗಿದ್ದಾರೆ’ ಎಂದು ಹೇಳಲಾಗಿದೆ.
ಸದ್ಯ, ಸಂತ್ರಸ್ತೆಯ ಯಾರೆಂಬುದು ಗೊತ್ತಾಗಿಲ್ಲ. ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement