ಬೆಂಗಳೂರಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲ: ಸರ್ಕಾರದ ಚಿಂತನೆ

ಬೆಂಗಳೂರು:ಕೋವಿಡ್ ಸಂಬಂಧ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿನ ಪ್ರಕರಣಗಳು ಗಣನೀಯವಾಗಿ ಇಳಿಕೆ ಕಾಣುತ್ತಿರುವುದರಿದ ಜೂ.೭ರ ಬಳಿಕ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಗೊಳಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ತಿಳಿಸಿದ್ದಾರೆ.
ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್ ಸಡಿಲಿಕೆ ಮಾಡುವುದಾದರೆ, ಹಂತ ಹಂತವಾಗಿ ಮಾಡಬೇಕು. ಆಗ ಮಾತ್ರ ಕೋವಿಡ್ ನಿಯಂತ್ರಣದಲ್ಲಿರುತ್ತದೆ. ಈ ಸಂಬಂಧ ಸರ್ಕಾರದೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಸಾಮಾನ್ಯ ಜೀವನಕ್ಕೆ ನಾವು ಮರಳಿ ಹೋಗಬೇಕು. ಜೊತೆಗೆ, ಸಾಮಾನ್ಯ ದಿನಗಳು ನಮಗೆ ಮರಳಿ ಬರಬೇಕು. ಆದರೆ, ಇವು ಹಂತ ಹಂತವಾಗಿ ನಡೆಯಬೇಕಾಗಿದೆ ಎಂದ ಅವರು, ಈ ಹಿಂದಿನ ಆನ್‌ಲಾಕ್ ಮಾದರಿಯಲ್ಲಿಯೇ ಕೊಂಚ ಮಟ್ಟಿಗೆ ಕೆಲ ನಿರ್ಬಂಧಗಳನ್ನು ಸಡಿಲಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ತೀರ ಕಡಿಮೆಯಾಗುತ್ತಿದೆ.ಇದೇ ಸಮಯದಲ್ಲಿ ಲಸಿಕೆ ಹಾಕುವ ಪ್ರಮಾಣವನ್ನೂ ಅಧಿಕಗೊಳಿಸಲಾಗುವುದು. ನಂತರ ಹಂತಹಂತವಾಗಿ ನಿರ್ಬಂಧ ಸಡಿಲಗೊಳಿಸಲಾಗುವುದು ಎಂದು ವಿವರಿಸಿದರು.
ಈ ಹಿಂದೆ ಬೆಂಗಳೂರಿನಲ್ಲಿ ೨೫-೩೦ ಸಾವಿರದವರೆಗೂ ಏರಿಕೆಯಾಗಿದ್ದ ದೈನಂದಿನ ಹೊಸ ಸೋಂಕು ಪ್ರಕರಣಗಳ ಪ್ರಮಾಣ ಇದೀಗ ಗಣನೀಯವಾಗಿ ಇಳಿಕೆಯಾಗಿದೆ. ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುವುದು ಉತ್ತಮ ಸಂಕೇತಾದರೂ, ಪ್ರಸ್ತುತ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಾಗಿ ಕಡಿಮೆಯಾಗಿದೆ. ಲಾಕ್‌ಡೌನ್ ತೆರವುಗೊಳಿಸಿದ ಬಳಿಕವೂ ಸೋಂಕಿನ ಪ್ರಮಾಣ ಹೆಚ್ಚಾಗದಂತೆ ತಡೆಯಲು ಜನರಲ್ಲಿ ಸ್ವಯಂ ಶಿಸ್ತು ಮೂಡಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಕೋವಿಡ್ ಸಾಂಕ್ರಾಮಿಕವನ್ನು ತಡೆಗಟ್ಟ ಬಹುದು ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement