ರಾಜ್ಯದಲ್ಲಿ ಇನ್ನೂ ಕೆಲವು ದಿನ ಲಾಕ್‌ಡೌನ್‌ ಮುಂದುವರಿಸಿ:ಎಚ್‌ಡಿಕೆ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಇನ್ನೂ ಸ್ವಲ್ಪ ದಿನ ಮುಂದುವರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವುನೋವುಗಳು ಇನ್ನೂ ನಿಂತಿಲ್ಲ. ಕೊರೊನಾ ಹೊಸ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ಲಾಕ್ ಡೌನ್ ಹಿಂಪಡೆದರೆ ಮತ್ತೆ ಅಪಾಯವಾಗಲಿದೆ ಎಂದು ಹೇಳಿದರು.
ಮೊದಲ ಹಂತದ ಪ್ಯಾಕೇಜ್ ಘೋಷಣೆ ತಲುಪಬೇಕಾದವರಿಗೆ ತಲುಪುವ ನಂಬಿಕೆ ಇಲ್ಲ. ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಇಲ್ಲ. ಜನತೆ ಸರ್ಕಾರದ ಖಜಾನೆಗೆ ಹಣ ಕೊಡುತ್ತಿದ್ದಾರೆ. ಅವರಿಗೆ ಇಷ್ಟು ಸಣ್ಣ ಪ್ರಮಾಣದ ಪ್ಯಾಕೇಜ್ ಸಾಕಾಗುವುದಿಲ್ಲ ಎಂದು ಅವರು ಹೇಳಿದರು.
ರಸ್ತೆ ಮತ್ತಿತರ ಕಾಮಗಾರಿಗಳಿಗೆ ಗುತ್ತಿಗೆದಾರರಿಗೆ ಕಿಕ್ ಬ್ಯಾಕ್ ಪಡೆದು ಅವಕಾಶ ಕೊಡುವುದನ್ನು ನಿಲ್ಲಿಸಿ, ಜನರ ಸಂಕಷ್ಟಕ್ಕೆ ನೆರವಾಗಿ. ಸರ್ಕಾರದ ಮೇಲೆ ಅವರು ಗಂಭೀರ ಆರೋಪ ಮಾಡಿದರು.
ಕೂಲಿ ಕಾರ್ಮಿಕರಿಗೆ, ನೇಕಾರರಿಗೆ, ಮೀನುಗಾರರಿಗೆ ಕನಿಷ್ಟ ಹದಿನೈದು ಸಾವಿರ ಪ್ಯಾಕೇಜ್ ಘೋಷಣೆ ಮಾಡಿ. ಕೊರೊನಾ, ಬ್ಲ್ಯಾಕ್‌ ಫಂಗಸ್‌, ವೈಟ್‌ ಫಂಗಸ್ ಮತ್ತಿತರ ಕಾಯಿಲೆಗಳಿಗೆ ಸೌಕರ್ಯಗಳನ್ನು ಒದಗಿಸುವ ವಿಚಾರದಲ್ಲಿ ಹಣ ಹೊಡೆಯುವ ಕೆಲಸ ಮಾಡಬೇಡಿ ಎಂದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement