ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಇಳಿಮುಖವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಕೆಲವೊಂದು ಸರ್ಕಾರಿ ಕಚೇರಿಗಳನ್ನು ತೆರೆಯಲು ಅನುಮತಿ ನೀಡಿದೆ.
ರಾಜ್ಯದ ಎಲ್ಲಾ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದು, ಕೊರೊನಾ ಮಾರ್ಗಸೂಚಿ ಅನುಸರಿಸಿ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ರಿಜಿಸ್ಟ್ರಾರ್ ಹಾಗೂ ಉಪನೊಂದಣಿ ಕಚೇರಿ ತೆರೆಯಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.


ನಿಮ್ಮ ಕಾಮೆಂಟ್ ಬರೆಯಿರಿ