ಮಕ್ಕಳಿಗೆ ಮದ್ಯ ಕುಡಿಸಿದ ದುಷ್ಕರ್ಮಿಗಳು ಓರ್ವನ ಬಂಧನ

ರಾಮನಗರ; ರಾಮನಗರದಲ್ಲಿ ಮಕ್ಕಳಿಗೆ ಮದ್ಯ ಕುಡಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ಬೆಳಕಿಗೆ ಬಂದಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಕೋಡಿಹಳ್ಳಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಬಾಳೆ ತೋಟದಲ್ಲಿ 10 ವರ್ಷದೊಳಗಿನ 7 ಮಕ್ಕಳು ಬಾಡೂಟದ ಜತೆಗೆ ಮದ್ಯ ಕುಡಿಯುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ.
ಮದ್ಯ‌ ಕುಡಿದ ಬಳಿಕ ಮಕ್ಕಳು ಬೈದಾಡಿಕೊಳ್ಳುತ್ತಿದ್ದಾರೆ. ಬಾಲಕನೊಬ್ಬ ತನಗೆ ಮದ್ಯ ಬೇಕು‌ ಎಂದು ಕೂಗಾಡುತ್ತಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಜನರು ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.
ಮಾಹಿತಿ ಗೊತ್ತಾಗುತ್ತಿದ್ದಂತೆ ಪ್ರಕರಣ ದಾಖಲು ಮಾಡಿಕೊಂಡ ಕೋಡಿಹಳ್ಳಿ ಠಾಣಾ ಪೊಲೀಸರು ಮೂವರ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ಮರಳೀಪುರ ಗ್ರಾಮದ ಗಣೇಶ್, ಪ್ರಮೋದ್, ಸೋಮಸುಂದರ್ ಆರೋಪಿಗಳೆಂದು ಹೇಳಲಾಗಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement